ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.
ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ ಭಾರತದ ಪಶ್ಚಿಮ ಕರಾವಳಿಯಲ್ಲಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10 ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.
ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು ಎಂಬ ವಿಶ್ಲೇಷಣೆಯೂ ಇದೆ.
ಶನಿವಾರ ಮಧ್ಯಾಹ್ನ ಸುರಿದ ಮಳೆ:
ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ ಕೇರಳವನ್ನು ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…