ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.
ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ, ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ ಭಾರತದ ಪಶ್ಚಿಮ ಕರಾವಳಿಯಲ್ಲಿ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10 ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.
ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು ಎಂಬ ವಿಶ್ಲೇಷಣೆಯೂ ಇದೆ.
ಶನಿವಾರ ಮಧ್ಯಾಹ್ನ ಸುರಿದ ಮಳೆ:
ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ ಕೇರಳವನ್ನು ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…