Advertisement
ಸುದ್ದಿಗಳು

ಮಳೆ…. ಮಳೆ …..! | ವಾಯುಭಾರ ಕುಸಿತ ಸರಿಯಾಗುವುದೇ….? | ಕಾದು ಕುಳಿತ ಚಂಡಮಾರುತ ದೂರವಾಗುವುದೇ…? |

Share

ಸುಳ್ಯ: ತಾಲೂಕಿನ ಕೆಲವು ಕಡೆ ಶನಿವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮಳೆಯಾಗಿದೆ. ಸುಬ್ರಹ್ಮಣ್ಯ ಬಳಿಯ ಕಲ್ಲಾಜೆ, ಗುತ್ತಿಗಾರಿನ ಕೆಲವು ಕಡೆ , ಏನೆಕಲ್ಲು ಸೇರಿದಂತೆ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ  ಹನಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬಂದಿತ್ತು.

ಹವಾಮಾನ ಮುನ್ಸೂಚನೆ ಪ್ರಕಾರ ಸುಳ್ಯ, ಸುಬ್ರಹ್ಮಣ್ಯ,  ಪುತ್ತೂರು, ಗುಂಡ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

 

ಬಂಗಾಳ ಕೊಲ್ಲಿಯ ಅಂಡಮಾನ್‌ ದ್ವೀಪದ ಬಳಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಇನ್ನೂ ಕೆಲವು ದಿನ ಮಳೆಯಾಗುವ ಮುನ್ಸೂಚನೆ ಇದೆ. ವಾಯುಭಾರ ಮತ್ತಷ್ಟು ಕುಸಿತವಾಗುತ್ತಿದ್ದು  ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದ್ದು ಹವಾಮಾನದ ಸ್ಪಷ್ಟ ಚಿತ್ರಣವು ಭಾನುವಾರ ಸಿಗಲಿದೆ. ಚಂಡಮಾರುತ ಉಂಟಾದರೆ  ಭಾರತದ ಪಶ್ಚಿಮ ಕರಾವಳಿಯಲ್ಲಿ  ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೇ.10  ಹಾಗೂ 11 ರಂದು ಮಳೆಯ ಸಾಧ್ಯತೆ ಹೆಚ್ಚಿದೆ.

ಆದರೆ ಭೂ ಮಧ್ಯೆ ರೇಖೆ ಗಿಂತ ಕೆಳ ಭಾಗದಲ್ಲಿ ಚಂಡಮಾರುತ ಉಂಟಾದರೆ  ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರಕ್ಕೆ ಹೆಚ್ಚಿನ ಸಂದರ್ಭ ಚಂಡಮಾರುತ ಪ್ರವೇಶಿಸುವುದಿಲ್ಲ. ಹೀಗಾಗಿ ವಾಯುಭಾರ ಕುಸಿತದಿಂದ ಮಳೆ ಮಾತ್ರವೇ ಬರಬಹುದು  ಎಂಬ ವಿಶ್ಲೇಷಣೆಯೂ ಇದೆ.

ಶನಿವಾರ ಮಧ್ಯಾಹ್ನ ಸುರಿದ ಮಳೆ:

 

ಈ ಬಾರಿ ಮುಂಗಾರು ಮಳೆ ನಿಗದಿತ ಸಮಯದಲ್ಲೇ ಆರಂಭವಾಗಲಿದೆ ಎನ್ನುವುದು  ಈಗಿನ ಅಂದಾಜು. ಜೂನ್ ಮೊದಲ ವಾರದಲ್ಲಿ  ಕೇರಳವನ್ನು  ಮುಂಗಾರು ಮಳೆ ಪ್ರವೇಶಿಸಿ ಉತ್ತಮ ಮಳೆಯಾಗಲಿದೆ. ಅದಾದ 4 ದಿನದಲ್ಲಿ ಕರ್ನಾಟಕ ಕರಾವಳಿ ಪ್ರವೇಶ ಮಾಡುವ ಮುಂಗಾರು  ಜೂನ್. 27 ರ ವೇಳೆಗೆ ನವದೆಹಲಿಗೆ ಪ್ರವೇಶವಾಗಬಹುದು , ಅದಕ್ಕೂ ಮುನ್ನ ಜೂ. 11 ರ ಸುಮಾರಿಗೆ ಮುಂಬೈ, ಕೋಲ್ಕತ್ತಾ ಮೊದಲಾದ ಕಡೆಗಳಲ್ಲಿ ಸುರಿಯಬಹುದು ಎನ್ನುವುದು ನಿರೀಕ್ಷೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

56 seconds ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

9 minutes ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

16 minutes ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

24 minutes ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

11 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

11 hours ago