ಮಡಿಕೇರಿ : ಪ್ರವಾಸಿತಾಣ ಮಾಂದಲಪಟ್ಟಿಗೆ ತೆರಳುವ ರಸ್ತೆಯಲ್ಲಿ ಮಳೆಯಿಂದ ಹಾನಿಯಾಗಿರುವ ಹಿನ್ನೆಲೆ ಪ್ರವಾಸಿಗರ ಪ್ರವೇಶವನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಾಂದಲಪಟ್ಟಿ ಭಾಗದಲ್ಲಿ ಮಳೆಯಿಂದ ಭೂಕುಸಿತವಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಜಿಲ್ಲಾಡಳಿತ ತಾಂತ್ರಿಕ ಸಮಿತಿಯೊಂದನ್ನು ರಚಿಸಿ ವರದಿಯನ್ನು ನೀಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಈ ಕ್ರಮ ಕೈಗೊಂಡಿದ್ದಾರೆ.
ಮಾಂದಲಪಟ್ಟಿಗೆ ತೆರಳುವ ರಸ್ತೆಯ ಹಲವು ಭಾಗಗಳಲ್ಲಿ ಭೂಕುಸಿತ ಉಂಟಾಗುತ್ತಿದ್ದು, ತೆರವುಗೊಳಿಸುತ್ತಿದ್ದರೂ ಕುಸಿತ ಮರುಕಳಿಸುತ್ತಿದೆ. ರಸ್ತೆಯು ಹಳ್ಳ ದಿಣ್ಣೆಗಳಿಂದ ಕೂಡಿದ್ದು, ರಸ್ತೆಯ ಮತ್ತೊಂದು ಬದಿಯಲ್ಲಿ ಆಳ ಪ್ರದೇಶ ಹಾಗೂ ತೋಟಗಳಿವೆ. ಹೆಚ್ಚಿನ ಮಳೆಯಾದರೆ ರಸ್ತೆ ಬದಿಯ ಗುಡ್ಡ ಕುಸಿಯುವ ಸಾಧ್ಯತೆಗಳು ಹೆಚ್ಚಿರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ.
ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ಆಗಸ್ಟ್ ತಿಂಗಳ ಅಂತ್ಯದವರೆಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧ ಮಾಡುವುದು ಸೂಕ್ತ ಎಂದು ತಾಂತ್ರಿಕ ಸಮಿತಿಯು ವರದಿ ಸಲ್ಲಿಸಿದೆ.
ಆದ್ದರಿಂದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾ.ಪಂ ವ್ಯಾಪ್ತಿಯ ಹೆಬ್ಬೆಟ್ಟಗೇರಿ-ದೇವಸ್ತೂರು-ಕಾಲೂರು-ಮಾಂದಲಪಟ್ಟಿ ರಸ್ತೆ ಹಾಗೂ ದೇವಸ್ತೂರು-ಮಾಂದಲಪಟ್ಟಿ ಈ ಎರಡೂ ರಸ್ತೆಗಳ ಮೂಲಕ ಮಾಂದಲಪಟ್ಟಿ ಪ್ರವಾಸಿತಾಣಕ್ಕೆ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…