ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ. ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.
ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ. ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127 ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…