ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ. ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.
ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ. ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127 ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…