ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ. ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.
ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ. ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127 ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…