ಭಾರೀ ಮಳೆಯಿಂದ ತಾಲೂಕಿನ ವಿವಿಧ ರಸ್ತೆಗಳು ಹಾನಿಯಾಗಿದೆ. ಈಗಾಗಲೇ ಜಿಲ್ಲೆಗೆ ಮಳೆಹಾನಿ ಅನುದಾನ ಲಭ್ಯವಾಗಿದೆ. ಇದರಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೂ ಆದ್ಯತೆ ಇರಲಿ ಎಂಬ ಆಶಯದೊಂದಿಗೆ……
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2019-20ನೇ ಸಾಲಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದ ರಾಜ್ಯ ಹೆದ್ದಾರಿ ರಸ್ತೆಗಳು, ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ ಸೇತುವೆಗಳು ಹಾನಿಗೊಂಡಿದೆ. ಹಾನಿಗೊಳಗಾದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ ಮತ್ತು ಸೇತುವೆ ದುರಸ್ತಿ ತುರ್ತಾಗಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆಗೆ ಒಟ್ಟು 27.14 ಕೋಟಿ ರೂ. ಅನುಮೋದನೆ ದೊರಕಿರುತ್ತದೆ.
ದಕ್ಷಿಣ ಕನ್ನಡ ಲೋಕೋಪಯೋಗಿ ಇಲಾಖೆ ಮಂಗಳೂರು ವಿಭಾಗದ ಅಧೀನದಲ್ಲಿರುವ ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಗಂಡಿ ಹಾಗೂ ಸುಳ್ಯ ಉಪವಿಭಾಗಗಳಿಗೆ ನೀಡಿರುವ ಅನುದಾನವನ್ನು ಪರಿಮಾಣಕ್ಕೆ ಅನುಗುಣವಾಗಿ ಮರುಹಂಚಿಕೆ ಮಾಡಿ ಕ್ರಿಯಾಯೋಜನೆ ತಯಾರಿಸಲಾಗಿರುತ್ತದೆ. ಲೋಕೋಪಯೋಗಿ ಮಂಗಳೂರು ವಿಭಾಗಕ್ಕೆ ರಾಜ್ಯಹೆದ್ದಾರಿ ರಸ್ತೆ ಹಾಗೂ ಸೇತುವೆ 71 ಕಾಮಗಾರಿಗಳಿಗೆ ರೂ 10.32 ಕೋಟಿ ಮತ್ತು ಜಿಲ್ಲಾ ಮುಖ್ಯ ರಸ್ತೆ ಹಾಗೂ ಸೇತುವೆ 127 ಕಾಮಗಾರಿಗಳಿಗೆ ರೂ 16.83 ಕೋಟಿಯಂತೆ ಒಟ್ಟು 198 ಕಾಮಗಾರಿಗಳಿಗೆ 27.14 ಕೋಟಿ ಕ್ರಿಯಾಯೋಜನೆ ತಯಾರಿಸಲಾಗಿದ್ದು ಈಗಾಗಲೇ ದುರಸ್ತಿ ಕಾಮಗಾರಿಗಳನ್ನು ಕೈಗೊಂಡಿದ್ದು ಪ್ರಗತಿಯಲ್ಲಿರುತ್ತದೆ ಎಂದು ಮಂಗಳೂರು ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದೆ.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…