ರಾಜ್ಯ

ಮಳೆ ಹಿನ್ನೆಲೆ : ಕೊಡಗಿನ ಮೂಲಕ ಮರ ಹಾಗೂ ಮರಳು ಸಾಗಾಟಕ್ಕೆ ನಿರ್ಬಂಧ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ : ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕೊಡಗಿನ ಮೂಲಕ ಮರ ಮತ್ತು ಮರಳು ಸಾಗಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಿದೆ. 2019 ಜೂನ್ 12 ರಿಂದ ಆಗಸ್ಟ್ 8 ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

Advertisement
Advertisement

ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಈ ಹಿನ್ನಲೆಯಲ್ಲಿ ಜೂನ್ 12 ರಿಂದ ಆಗಸ್ಟ್ 8 ರವರೆಗೆ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಜಿಲ್ಲಾದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ನಿರ್ಬಂಧಿತ ವಾಹನಗಳು :
ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು. ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು. ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು.

ವಿನಾಯಿತಿ ನೀಡಿದ ವಾಹನಗಳು :
ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು. ಹಾಲು ಪೂರೈಕೆ ವಾಹನಗಳು. ಸರಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು.ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ) . ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅನುಮತಿಸಿದೆ.

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ಗಸ್ತು ಕಾಯುವಂತೆ ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

41 minutes ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

1 hour ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

1 hour ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago