ಮಂಗಳೂರು/ಸುಳ್ಯ: ಶಿರಾಡಿ ಘಾಟಿಯಲ್ಲಿ 4 ದಿನಗಳ ಕಾಲ ರಾತ್ರಿ ವಾಹನ ಸಂಚಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ 5 ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿಷೇಧಿಸಿ ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಆ.9 ರಿಂದ ಆ.12 ರ ವರೆಗೆ 4 ದಿನಗಳ ಕಾಲ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ನಿಷೇಧಿಸಲಾಗಿದೆ.
ಶಿರಾಡಿ ಘಾಟಿಯಲ್ಲಿ ಮಳೆಯ ಕಾರಣದಿಂದ ಮರಗಳು ಬಾಗುವ , ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಚಾರ್ಮಾಡಿ ರಸ್ತೆಯಲ್ಲೂ ವಾಹನ ಸಂಚಾರ ಸ್ಥಗಿತವಾಗಿದೆ. ಚಾರ್ಮಾಡಿ ರಸ್ತೆಯಲ್ಲೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರ ನಿಷೇಧಿಸಿ ಆ.14 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…