ಮಂಗಳೂರು/ಸುಳ್ಯ: ಶಿರಾಡಿ ಘಾಟಿಯಲ್ಲಿ 4 ದಿನಗಳ ಕಾಲ ರಾತ್ರಿ ವಾಹನ ಸಂಚಾರ ಹಾಗೂ ಚಾರ್ಮಾಡಿ ಘಾಟಿಯಲ್ಲಿ 5 ದಿನಗಳ ಕಾಲ ಸಂಪೂರ್ಣ ವಾಹನ ಸಂಚಾರ ನಿಷೇಧಿಸಿ ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಆದೇಶ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರವನ್ನು ಆ.9 ರಿಂದ ಆ.12 ರ ವರೆಗೆ 4 ದಿನಗಳ ಕಾಲ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ನಿಷೇಧಿಸಲಾಗಿದೆ.
ಶಿರಾಡಿ ಘಾಟಿಯಲ್ಲಿ ಮಳೆಯ ಕಾರಣದಿಂದ ಮರಗಳು ಬಾಗುವ , ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಚಾರ್ಮಾಡಿ ರಸ್ತೆಯಲ್ಲೂ ವಾಹನ ಸಂಚಾರ ಸ್ಥಗಿತವಾಗಿದೆ. ಚಾರ್ಮಾಡಿ ರಸ್ತೆಯಲ್ಲೂ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರ ನಿಷೇಧಿಸಿ ಆ.14 ರವರೆಗೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರ ಆದೇಶದಲ್ಲಿ ತಿಳಿಸಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…