( ಮಳೆಯ ಬಗ್ಗೆ ಮಲೆಯಾಳದಲ್ಲಿ ಬರೆದಿರುವ ಬರಹವೊಂದರ ಅನುವಾದ ಹೀಗಿದೆ )
ಇಂದು ಮಳೆ ನುಡಿಯಿತು….
ಅಂದು ನಾನು ಹಲವು ಬಾರಿ ಹೇಳಿದ್ದೆ, ಬೇಡ.. ಬೇಡ ಅಂತ… ಆದರೆ ನೀವು ನನ್ನ ದಾರಿ ಅಡ್ಡಗಟ್ಟಿದಿರಿ.
ಹೊಳೆಯೂ ಹೇಳಿತು…
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ,ನನ್ನ ದಡವನ್ನು ಆಕ್ರಮಿಸಿದಿರಿ
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಆದರೆ ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ.. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯಕ್ಕೆ ಮಣ್ಣು ತುಂಬಿದಿರಿ..
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ ಮಳೆಗೆ ಅಲುಗಾಡದೆ ಗಟ್ಟಿ ನಿಂತಿದ್ದೆ… ಆದರೆ ನೀವು ನನ್ನ ಕಾಲು ತುಂಡರಿಸಿದಿರಿ… ನನಗೆ ಕಾಲು ಗಟ್ಟಿ ಊರಲಾಗದೆ, ಭೂಕುಸಿದು ಬೀಳುತ್ತಿದ್ದೇನೆ…
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ..ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ..? ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…..
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ..? ನಾನು ನನ್ನ ಪಾಡಿಗೆ ಹೋಗುವೆ…
ಭೂಮಿ ಕೇಳುತ್ತಿದೆ…
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ,ಜಲಾಶಯ ವಾಪಸ್ಸು ಕೊಡುವಿರಾ ? ಅಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ…
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ..? ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ…
ನೆನಪಿರಲಿ….
ನಾವು ಮನುಷ್ಯರು ಪ್ರಕೃತಿಯ ಕಾವಲುಗಾರರು ಮಾತ್ರ… ಒಡೆಯರಲ್ಲ..!
ಮರೆತರೆ…
ಪ್ರಕೃತಿಯೇ … ಅದು ತಾನು ಏನೆಂಬುದನ್ನು ನಮಗೆ ಕಲಿಸಿ ಕೊಡುತ್ತದೆ…
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ
(ಸಂಗ್ರಹಾನುವಾದ…ಕೆ.ಪಿ.ನಾಭ ಐ ಎಲ್ )
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…