( ಮಳೆಯ ಬಗ್ಗೆ ಮಲೆಯಾಳದಲ್ಲಿ ಬರೆದಿರುವ ಬರಹವೊಂದರ ಅನುವಾದ ಹೀಗಿದೆ )
ಇಂದು ಮಳೆ ನುಡಿಯಿತು….
ಅಂದು ನಾನು ಹಲವು ಬಾರಿ ಹೇಳಿದ್ದೆ, ಬೇಡ.. ಬೇಡ ಅಂತ… ಆದರೆ ನೀವು ನನ್ನ ದಾರಿ ಅಡ್ಡಗಟ್ಟಿದಿರಿ.
ಹೊಳೆಯೂ ಹೇಳಿತು…
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ,ನನ್ನ ದಡವನ್ನು ಆಕ್ರಮಿಸಿದಿರಿ
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಆದರೆ ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ.. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯಕ್ಕೆ ಮಣ್ಣು ತುಂಬಿದಿರಿ..
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ ಮಳೆಗೆ ಅಲುಗಾಡದೆ ಗಟ್ಟಿ ನಿಂತಿದ್ದೆ… ಆದರೆ ನೀವು ನನ್ನ ಕಾಲು ತುಂಡರಿಸಿದಿರಿ… ನನಗೆ ಕಾಲು ಗಟ್ಟಿ ಊರಲಾಗದೆ, ಭೂಕುಸಿದು ಬೀಳುತ್ತಿದ್ದೇನೆ…
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ..ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ..? ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…..
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ..? ನಾನು ನನ್ನ ಪಾಡಿಗೆ ಹೋಗುವೆ…
ಭೂಮಿ ಕೇಳುತ್ತಿದೆ…
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ,ಜಲಾಶಯ ವಾಪಸ್ಸು ಕೊಡುವಿರಾ ? ಅಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ…
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ..? ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ…
ನೆನಪಿರಲಿ….
ನಾವು ಮನುಷ್ಯರು ಪ್ರಕೃತಿಯ ಕಾವಲುಗಾರರು ಮಾತ್ರ… ಒಡೆಯರಲ್ಲ..!
ಮರೆತರೆ…
ಪ್ರಕೃತಿಯೇ … ಅದು ತಾನು ಏನೆಂಬುದನ್ನು ನಮಗೆ ಕಲಿಸಿ ಕೊಡುತ್ತದೆ…
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ
(ಸಂಗ್ರಹಾನುವಾದ…ಕೆ.ಪಿ.ನಾಭ ಐ ಎಲ್ )
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…