( ಮಳೆಯ ಬಗ್ಗೆ ಮಲೆಯಾಳದಲ್ಲಿ ಬರೆದಿರುವ ಬರಹವೊಂದರ ಅನುವಾದ ಹೀಗಿದೆ )
ಇಂದು ಮಳೆ ನುಡಿಯಿತು….
ಅಂದು ನಾನು ಹಲವು ಬಾರಿ ಹೇಳಿದ್ದೆ, ಬೇಡ.. ಬೇಡ ಅಂತ… ಆದರೆ ನೀವು ನನ್ನ ದಾರಿ ಅಡ್ಡಗಟ್ಟಿದಿರಿ.
ಹೊಳೆಯೂ ಹೇಳಿತು…
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ…
ಆದರೆ ನೀವು ನನ್ನ ಹೃದಯ ಹಿಸುಕಿ,ನನ್ನ ದಡವನ್ನು ಆಕ್ರಮಿಸಿದಿರಿ
ಭೂಮಿಯೂ ಹೇಳಿತು…
ಅಂದು ನಾನು ಸಾಕಷ್ಟು ಜಲ ಹೀರಿದ್ದೆ…
ಆದರೆ ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ.. ನಾನು ನೀರು ಸಂಗ್ರಹಿಸುತ್ತಿದ್ದ ಹೊಲ – ಜಲಾಶಯಕ್ಕೆ ಮಣ್ಣು ತುಂಬಿದಿರಿ..
ಬೆಟ್ಟವೂ ನುಡಿಯಿತು…
ಅಂದು ನಾನು ಭೀಕರ ಗಾಳಿ ಮಳೆಗೆ ಅಲುಗಾಡದೆ ಗಟ್ಟಿ ನಿಂತಿದ್ದೆ… ಆದರೆ ನೀವು ನನ್ನ ಕಾಲು ತುಂಡರಿಸಿದಿರಿ… ನನಗೆ ಕಾಲು ಗಟ್ಟಿ ಊರಲಾಗದೆ, ಭೂಕುಸಿದು ಬೀಳುತ್ತಿದ್ದೇನೆ…
ಈಗ ಮಳೆ ಕೇಳುತ್ತಿದೆ…
ನೀವು ಮಣ್ಣು ತುಂಬಿದ ನದಿ..ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ..? ನಾನು ನನ್ನ ಪಾಡಿಗೆ ಹೋಗುವೆ…
ಹೊಳೆ ಕೇಳುತ್ತಿದೆ…..
ನೀವು ನನ್ನಿಂದ ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ..? ನಾನು ನನ್ನ ಪಾಡಿಗೆ ಹೋಗುವೆ…
ಭೂಮಿ ಕೇಳುತ್ತಿದೆ…
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ,ಜಲಾಶಯ ವಾಪಸ್ಸು ಕೊಡುವಿರಾ ? ಅಲ್ಲೇ ಹಾಯಾಗಿರುವೆ..
ಬೆಟ್ಟವೂ ಕೇಳುತ್ತಿದೆ…
ಇನ್ನಾದರೂ ನನ್ನ ಕಾಲು ಕಡಿಯುವುದನ್ನು ನಿಲ್ಲಿಸುವಿರಾ..? ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ…
ನೆನಪಿರಲಿ….
ನಾವು ಮನುಷ್ಯರು ಪ್ರಕೃತಿಯ ಕಾವಲುಗಾರರು ಮಾತ್ರ… ಒಡೆಯರಲ್ಲ..!
ಮರೆತರೆ…
ಪ್ರಕೃತಿಯೇ … ಅದು ತಾನು ಏನೆಂಬುದನ್ನು ನಮಗೆ ಕಲಿಸಿ ಕೊಡುತ್ತದೆ…
ಈ ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ
(ಸಂಗ್ರಹಾನುವಾದ…ಕೆ.ಪಿ.ನಾಭ ಐ ಎಲ್ )
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…