ಮಹಾಪ್ರಳಯಕ್ಕೆ ತೂಗು ಸೇತುವೆಗಳೂ ಏಕೆ ನಾಶವಾದವು? – ನೋವು ತೋಡಿಕೊಂಡ ತೂಗು ಸೇತುವೆಗಳ ಶಿಲ್ಪಿ

August 12, 2019
8:30 AM

ಸುಳ್ಯ: ರಾಜ್ಯ ಕಂಡು ಕೇಳರಿಯದಷ್ಟು ಭೀಕರ ಪ್ರಳಯಕ್ಕೆ ಸಿಲುಕಿ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಪ್ರಳಯದಿಂದ ನೂರಾರು ರಸ್ತೆಗಳು, ಸೆತುವೆಗಳು ಕೊಚ್ಚಿ ಹೋಗಿದೆ. ಪ್ರಳಯದ ತೀವ್ರತೆ ಎಷ್ಟಿತ್ತೆಂದರೆ ಮುಗಿಲೆತ್ತರದ ತೂಗು ಸೇತುವೆಗಳನನ್ನೂ ಪ್ರಳಯ ಜಲ ಕೊಚ್ಚಿ ಕೊಂಡು ಹೋಗಿದೆ. ತಾನು ನಿರ್ಮಿಸಿದ ತೂಗು ಸೇತುವೆಗಳು ಪ್ರಳಯಕ್ಕೆ ಸಿಲುಕಿ ಕೊಚ್ಚಿ ಹೋಗಿರುವುದು ತಿಳಿದು ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪ್ರಶಸ್ತಿ ವಿಜೇತ ಸುಳ್ಯದ ಇಂಜಿನಿಯರ್ ಗಿರೀಶ್ ಭಾರದ್ವಾಜ್ ನೋವು ತೋಡಿಕೊಂಡಿದ್ದಾರೆ.

Advertisement
Advertisement

ಉಪ್ಪಿನಂಗಡಿ ಸಮೀಪ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಮುಗೇರಡ್ಕ ತೂಗು ಸೇತುವೆ ಸೇರಿ ರಾಜ್ಯದಲ್ಲಿ ಎಂಟರಿಂದ ಹತ್ತು ಸೇತುವೆಗಳಿಗೆ ಹಾನಿ ಸಂಭವಿಸಿದೆ ಎಂಬ ಮಾಹಿತಿ ಬಂದಿದೆ ಎಂದು ಗಿರೀಶ್ ಭಾರದ್ವಾಜ್ ತಿಳಿಸಿದ್ದಾರೆ. ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಇವರು ನಿರ್ಮಿಸಿದ ಹಲವು ಸೇತುವೆಗಳಿಗೆ ಹಾನಿ ಉಂಟಾಗಿದೆ. ಮಳೆಗಾಲದಲ್ಲಿ ದ್ವೀಪವಾಗುವ ನೂರಾರು ಹಳ್ಳಿಗಳಿಗೆ ತೂಗು ಸೇತುವೆಗಳ ಮೂಲಕ ಸೇತು ಬಂಧ ಕಲ್ಪಿಸಿ ಜನರನ್ನು ಹೊರ ಜಗತ್ತಿಗೆ ಸಂಪರ್ಕ ಕಲ್ಪಿಸಿದವರು ಸುಳ್ಯದ ಗಿರೀಶ್ ಭಾರದ್ವಾಜ್. ತೂಗುಸೇತುವೆಗಳ ಸರದಾರನೆಂದು ಹೆಸರು ಮಾಡಿದ ಗಿರೀಶರ ಅಪೂರ್ವ ಸಾಧನೆಗೆ ದೇಶ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ತೂಗು ಸೇತುವೆಗಳು ಪ್ರಳಯಕ್ಕೆ ಸಿಲುಕಿ ಹಾನಿಯಾಗಿದೆ ಎಂದಾಗ ತುಂಬಾ ನೋವಾಯಿತು. ತನ್ನ ಕೃತಿಗಳು ನನ್ನ ಕಣ್ಣೆದುರಿನಲ್ಲೇ ನಾಶವಾಯಿತಲ್ಲಾ ಎಂಬ ನೋವಿನ ಜೊತೆಗೆ ತೂಗು ಸೇತುವೆ ಹಾನಿಯಾದ ಕಾರಣ ಆ ಹಳ್ಳಿಯ ಜನರ ಬದುಕು ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತಲ್ಲ, ಜನರಿಗೆ ಮತ್ತೆ ಸಂಕಷ್ಟದ, ತೆಪ್ಪದ ಬದುಕು ಮರುಕಳಿಸುತ್ತದೆ ಅಲ್ವಾ ಎಂಬ ಬೇಷರ ಉಂಟಾಗಿದೆ ಎನ್ನುತ್ತಾರೆ ಗಿರೀಶ್ ಭಾರದ್ವಾಜ್.

Advertisement

50 ವರ್ಷದ ನೀರಿನ ಹರಿವು ಅಂದಾಜಿಸಿ ನಿರ್ಮಾಣ:

ಸಾಮಾನ್ಯವಾಗಿ ತೂಗು ಸೇತುವೆಗಳು ನದಿಯಲ್ಲಿ ಹರಿಯುವ ನೀರಿಗೆ ಸಿಲುಕಿ ಕೊಚ್ಚಿ ಹೋಗುವುದಿಲ್ಲ. ಮುಗಿಲೆತ್ತರದಲ್ಲಿ ನೀರಿಗೆ ಎಟಕದಷ್ಟು ಎತ್ತರದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಸೇತುವೆ ನಿರ್ಮಾಣ ಮಾಡುವ ಪ್ರದೇಶದಲ್ಲಿ 50 ವರ್ಷಗಳಲ್ಲಿ ನದಿಯ ನೀರಿನ ಹರಿವನ್ನು ಅಧ್ಯಯನ ನಡೆಸಿ ನೀರಿನ ಮಟ್ಟವನ್ನು ಅಂದಾಜಿಸಿ ಅತೀ ಹೆಚ್ಚು ನೀರು ಹರಿದಕ್ಕಿಂತ ಸುಮಾರು 10 ಅಡಿ ಮೇಲೆ ತೂಗು ಸೇತುವೆ ನಿರ್ಮಿಸಲಾಗುತ್ತದೆ. ಆದರೇ ಈ ಬಾರಿ ಉಕ್ಕಿ ಬಂದ ನೆರೆ ನೀರು ಅಷ್ಟೂ ಎತ್ತರಕ್ಕೆ ಹರಿದು ತೂಗು ಸೇತುವೆಗಳನ್ನು ಆಫೋಷನ ತೆಗೆದುಕೊಂಡಿದೆ. ನೀರಿನ ಹರಿವಿನ ರಭಸದ ಜೊತೆಗೆ ಮರ ಮಟ್ಟುಗಳು ಹರಿದು ಬಂದು ತೂಗು ಸೇತುವೆಯ ಕಂಬ ಮತ್ತಿತರ ಭಾಗಗಳಿಗೆ ಬಡಿದು ಹಾನಿ ಸಂಭವಿಸಿದೆ. ಒಟ್ಟಿನಲ್ಲಿ ಗ್ರಾಮೀಣ ಭಾಗದ ಜನರಿಗೆ ಹೊರ ಜಗತ್ತಿಗೆ ಸಂಪರ್ಕ ಕಲ್ಪಿಸುವ ತೂಗು ಸೇತುವೆಗಳಿಗೂ ಪ್ರಳಯ ಕಂಠಕವನ್ನು ತಂದಿದೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ
ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ

You cannot copy content of this page - Copyright -The Rural Mirror