Advertisement
ವಿಶೇಷ ವರದಿಗಳು

ಮಹಾಪ್ರಳಯಕ್ಕೆ ತೂಗು ಸೇತುವೆಗಳೂ ಏಕೆ ನಾಶವಾದವು? – ನೋವು ತೋಡಿಕೊಂಡ ತೂಗು ಸೇತುವೆಗಳ ಶಿಲ್ಪಿ

Share

ಸುಳ್ಯ: ರಾಜ್ಯ ಕಂಡು ಕೇಳರಿಯದಷ್ಟು ಭೀಕರ ಪ್ರಳಯಕ್ಕೆ ಸಿಲುಕಿ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಪ್ರಳಯದಿಂದ ನೂರಾರು ರಸ್ತೆಗಳು, ಸೆತುವೆಗಳು ಕೊಚ್ಚಿ ಹೋಗಿದೆ. ಪ್ರಳಯದ ತೀವ್ರತೆ ಎಷ್ಟಿತ್ತೆಂದರೆ ಮುಗಿಲೆತ್ತರದ ತೂಗು ಸೇತುವೆಗಳನನ್ನೂ ಪ್ರಳಯ ಜಲ ಕೊಚ್ಚಿ ಕೊಂಡು ಹೋಗಿದೆ. ತಾನು ನಿರ್ಮಿಸಿದ ತೂಗು ಸೇತುವೆಗಳು ಪ್ರಳಯಕ್ಕೆ ಸಿಲುಕಿ ಕೊಚ್ಚಿ ಹೋಗಿರುವುದು ತಿಳಿದು ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪ್ರಶಸ್ತಿ ವಿಜೇತ ಸುಳ್ಯದ ಇಂಜಿನಿಯರ್ ಗಿರೀಶ್ ಭಾರದ್ವಾಜ್ ನೋವು ತೋಡಿಕೊಂಡಿದ್ದಾರೆ.

ಉಪ್ಪಿನಂಗಡಿ ಸಮೀಪ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ ಮುಗೇರಡ್ಕ ತೂಗು ಸೇತುವೆ ಸೇರಿ ರಾಜ್ಯದಲ್ಲಿ ಎಂಟರಿಂದ ಹತ್ತು ಸೇತುವೆಗಳಿಗೆ ಹಾನಿ ಸಂಭವಿಸಿದೆ ಎಂಬ ಮಾಹಿತಿ ಬಂದಿದೆ ಎಂದು ಗಿರೀಶ್ ಭಾರದ್ವಾಜ್ ತಿಳಿಸಿದ್ದಾರೆ. ಉತ್ತರ ಕನ್ನಡ ಮತ್ತು ಬೆಳಗಾವಿಯಲ್ಲಿ ಇವರು ನಿರ್ಮಿಸಿದ ಹಲವು ಸೇತುವೆಗಳಿಗೆ ಹಾನಿ ಉಂಟಾಗಿದೆ. ಮಳೆಗಾಲದಲ್ಲಿ ದ್ವೀಪವಾಗುವ ನೂರಾರು ಹಳ್ಳಿಗಳಿಗೆ ತೂಗು ಸೇತುವೆಗಳ ಮೂಲಕ ಸೇತು ಬಂಧ ಕಲ್ಪಿಸಿ ಜನರನ್ನು ಹೊರ ಜಗತ್ತಿಗೆ ಸಂಪರ್ಕ ಕಲ್ಪಿಸಿದವರು ಸುಳ್ಯದ ಗಿರೀಶ್ ಭಾರದ್ವಾಜ್. ತೂಗುಸೇತುವೆಗಳ ಸರದಾರನೆಂದು ಹೆಸರು ಮಾಡಿದ ಗಿರೀಶರ ಅಪೂರ್ವ ಸಾಧನೆಗೆ ದೇಶ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. ತೂಗು ಸೇತುವೆಗಳು ಪ್ರಳಯಕ್ಕೆ ಸಿಲುಕಿ ಹಾನಿಯಾಗಿದೆ ಎಂದಾಗ ತುಂಬಾ ನೋವಾಯಿತು. ತನ್ನ ಕೃತಿಗಳು ನನ್ನ ಕಣ್ಣೆದುರಿನಲ್ಲೇ ನಾಶವಾಯಿತಲ್ಲಾ ಎಂಬ ನೋವಿನ ಜೊತೆಗೆ ತೂಗು ಸೇತುವೆ ಹಾನಿಯಾದ ಕಾರಣ ಆ ಹಳ್ಳಿಯ ಜನರ ಬದುಕು ಮತ್ತೆ ಸಂಕಷ್ಟಕ್ಕೆ ಸಿಲುಕಿಕೊಂಡಿತ್ತಲ್ಲ, ಜನರಿಗೆ ಮತ್ತೆ ಸಂಕಷ್ಟದ, ತೆಪ್ಪದ ಬದುಕು ಮರುಕಳಿಸುತ್ತದೆ ಅಲ್ವಾ ಎಂಬ ಬೇಷರ ಉಂಟಾಗಿದೆ ಎನ್ನುತ್ತಾರೆ ಗಿರೀಶ್ ಭಾರದ್ವಾಜ್.

50 ವರ್ಷದ ನೀರಿನ ಹರಿವು ಅಂದಾಜಿಸಿ ನಿರ್ಮಾಣ:

ಸಾಮಾನ್ಯವಾಗಿ ತೂಗು ಸೇತುವೆಗಳು ನದಿಯಲ್ಲಿ ಹರಿಯುವ ನೀರಿಗೆ ಸಿಲುಕಿ ಕೊಚ್ಚಿ ಹೋಗುವುದಿಲ್ಲ. ಮುಗಿಲೆತ್ತರದಲ್ಲಿ ನೀರಿಗೆ ಎಟಕದಷ್ಟು ಎತ್ತರದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗುತ್ತದೆ. ಸೇತುವೆ ನಿರ್ಮಾಣ ಮಾಡುವ ಪ್ರದೇಶದಲ್ಲಿ 50 ವರ್ಷಗಳಲ್ಲಿ ನದಿಯ ನೀರಿನ ಹರಿವನ್ನು ಅಧ್ಯಯನ ನಡೆಸಿ ನೀರಿನ ಮಟ್ಟವನ್ನು ಅಂದಾಜಿಸಿ ಅತೀ ಹೆಚ್ಚು ನೀರು ಹರಿದಕ್ಕಿಂತ ಸುಮಾರು 10 ಅಡಿ ಮೇಲೆ ತೂಗು ಸೇತುವೆ ನಿರ್ಮಿಸಲಾಗುತ್ತದೆ. ಆದರೇ ಈ ಬಾರಿ ಉಕ್ಕಿ ಬಂದ ನೆರೆ ನೀರು ಅಷ್ಟೂ ಎತ್ತರಕ್ಕೆ ಹರಿದು ತೂಗು ಸೇತುವೆಗಳನ್ನು ಆಫೋಷನ ತೆಗೆದುಕೊಂಡಿದೆ. ನೀರಿನ ಹರಿವಿನ ರಭಸದ ಜೊತೆಗೆ ಮರ ಮಟ್ಟುಗಳು ಹರಿದು ಬಂದು ತೂಗು ಸೇತುವೆಯ ಕಂಬ ಮತ್ತಿತರ ಭಾಗಗಳಿಗೆ ಬಡಿದು ಹಾನಿ ಸಂಭವಿಸಿದೆ. ಒಟ್ಟಿನಲ್ಲಿ ಗ್ರಾಮೀಣ ಭಾಗದ ಜನರಿಗೆ ಹೊರ ಜಗತ್ತಿಗೆ ಸಂಪರ್ಕ ಕಲ್ಪಿಸುವ ತೂಗು ಸೇತುವೆಗಳಿಗೂ ಪ್ರಳಯ ಕಂಠಕವನ್ನು ತಂದಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

4 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago