ಮಹಾಮಳೆ ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ ವಿಶೇಷ ಪ್ರಾರ್ಥನೆ ನಡೆದಿದೆ..
ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು ಪ್ರಾಕೃತಿಕ ವಿಕೋಪದಿಂದ ರಕ್ಷಿಸುವಂತೆ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮಾನವ, ಜಾನುವಾರು ಜೀವಹಾನಿಯಾಗಿದ್ದು, ಕೃಷಿ ಕ್ಷೇತ್ರ ಹಾಗೂ ತೋಟಗಳು ಕೊಚ್ಚಿ ಹೋಗಿವೆ. ಭವಿಷ್ಯದ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂದು ಜಿಲ್ಲೆಯ ಜನ ಚಿಂತಾಕ್ರಾಂತರಾಗಿದ್ದಾರೆ. ಈ ರೀತಿಯ ಪರಿಸ್ಥಿತಿ ಮುಂದೆ ಬಾರದಿರಲಿ ಮತ್ತು ಜಿಲ್ಲೆಯ ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಭಕ್ತಸಮೂಹ ಬೇಡಿಕೊಂಡಿತು.
ಕುಲದೇವಿ ಎನಿಸಿರುವ ಕಾವೇರಿ, ಮಹಾಗಣಪತಿ ಮತ್ತು ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಶಾಂತಾಚಾರ್ ಹಾಗೂ ಟಿ.ಎಸ್.ನಾರಾಯಣಾಚಾರ್ ವಿಶೇಷ ಪೂಜೆ ಸಲ್ಲಿಸಿದರು. ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಪ್ರಾರ್ಥಿಸಿದರು.
ಗ್ರಾಮದ ಪ್ರಮುಖರಾದ ಕುದುಕುಳಿ ಭರತ್ ಸೇರಿದಂತೆ ಹಿರಿಯರಾದ ಜಿ.ರಾಜೇಂದ್ರ, ಎಂ.ಬಿ.ದೇವಯ್ಯ ದೇವಿಪೂಣಚ್ಚ, ಕಾಳನರವಿ, ಉಮಾಪ್ರಭು, ಕುದುಪಜೆ ಪಳಂಗಪ್ಪ, ದಾಸಪ್ಪ, ಕುಡಿಯರ ಮುತ್ತಪ್ಪ, ದೇವಂಗೋಡಿ ಹರೀಶ್, ಹೊಸಗದ್ದೆ ಭಾಸ್ಕರ್ ಹಾಗೂ ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…