ಮಹಾಮಳೆ ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ ವಿಶೇಷ ಪ್ರಾರ್ಥನೆ ನಡೆದಿದೆ..
ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು ಪ್ರಾಕೃತಿಕ ವಿಕೋಪದಿಂದ ರಕ್ಷಿಸುವಂತೆ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮಾನವ, ಜಾನುವಾರು ಜೀವಹಾನಿಯಾಗಿದ್ದು, ಕೃಷಿ ಕ್ಷೇತ್ರ ಹಾಗೂ ತೋಟಗಳು ಕೊಚ್ಚಿ ಹೋಗಿವೆ. ಭವಿಷ್ಯದ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂದು ಜಿಲ್ಲೆಯ ಜನ ಚಿಂತಾಕ್ರಾಂತರಾಗಿದ್ದಾರೆ. ಈ ರೀತಿಯ ಪರಿಸ್ಥಿತಿ ಮುಂದೆ ಬಾರದಿರಲಿ ಮತ್ತು ಜಿಲ್ಲೆಯ ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಭಕ್ತಸಮೂಹ ಬೇಡಿಕೊಂಡಿತು.
ಕುಲದೇವಿ ಎನಿಸಿರುವ ಕಾವೇರಿ, ಮಹಾಗಣಪತಿ ಮತ್ತು ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಶಾಂತಾಚಾರ್ ಹಾಗೂ ಟಿ.ಎಸ್.ನಾರಾಯಣಾಚಾರ್ ವಿಶೇಷ ಪೂಜೆ ಸಲ್ಲಿಸಿದರು. ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಪ್ರಾರ್ಥಿಸಿದರು.
ಗ್ರಾಮದ ಪ್ರಮುಖರಾದ ಕುದುಕುಳಿ ಭರತ್ ಸೇರಿದಂತೆ ಹಿರಿಯರಾದ ಜಿ.ರಾಜೇಂದ್ರ, ಎಂ.ಬಿ.ದೇವಯ್ಯ ದೇವಿಪೂಣಚ್ಚ, ಕಾಳನರವಿ, ಉಮಾಪ್ರಭು, ಕುದುಪಜೆ ಪಳಂಗಪ್ಪ, ದಾಸಪ್ಪ, ಕುಡಿಯರ ಮುತ್ತಪ್ಪ, ದೇವಂಗೋಡಿ ಹರೀಶ್, ಹೊಸಗದ್ದೆ ಭಾಸ್ಕರ್ ಹಾಗೂ ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…