ಮಹಾಮಳೆ ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ ವಿಶೇಷ ಪ್ರಾರ್ಥನೆ ನಡೆದಿದೆ..
ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು ಪ್ರಾಕೃತಿಕ ವಿಕೋಪದಿಂದ ರಕ್ಷಿಸುವಂತೆ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮಾನವ, ಜಾನುವಾರು ಜೀವಹಾನಿಯಾಗಿದ್ದು, ಕೃಷಿ ಕ್ಷೇತ್ರ ಹಾಗೂ ತೋಟಗಳು ಕೊಚ್ಚಿ ಹೋಗಿವೆ. ಭವಿಷ್ಯದ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂದು ಜಿಲ್ಲೆಯ ಜನ ಚಿಂತಾಕ್ರಾಂತರಾಗಿದ್ದಾರೆ. ಈ ರೀತಿಯ ಪರಿಸ್ಥಿತಿ ಮುಂದೆ ಬಾರದಿರಲಿ ಮತ್ತು ಜಿಲ್ಲೆಯ ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಭಕ್ತಸಮೂಹ ಬೇಡಿಕೊಂಡಿತು.
ಕುಲದೇವಿ ಎನಿಸಿರುವ ಕಾವೇರಿ, ಮಹಾಗಣಪತಿ ಮತ್ತು ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಶಾಂತಾಚಾರ್ ಹಾಗೂ ಟಿ.ಎಸ್.ನಾರಾಯಣಾಚಾರ್ ವಿಶೇಷ ಪೂಜೆ ಸಲ್ಲಿಸಿದರು. ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಪ್ರಾರ್ಥಿಸಿದರು.
ಗ್ರಾಮದ ಪ್ರಮುಖರಾದ ಕುದುಕುಳಿ ಭರತ್ ಸೇರಿದಂತೆ ಹಿರಿಯರಾದ ಜಿ.ರಾಜೇಂದ್ರ, ಎಂ.ಬಿ.ದೇವಯ್ಯ ದೇವಿಪೂಣಚ್ಚ, ಕಾಳನರವಿ, ಉಮಾಪ್ರಭು, ಕುದುಪಜೆ ಪಳಂಗಪ್ಪ, ದಾಸಪ್ಪ, ಕುಡಿಯರ ಮುತ್ತಪ್ಪ, ದೇವಂಗೋಡಿ ಹರೀಶ್, ಹೊಸಗದ್ದೆ ಭಾಸ್ಕರ್ ಹಾಗೂ ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…