Advertisement
MIRROR FOCUS

ಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆ

Share

ಮಹಾಮಳೆ  ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ  ವಿಶೇಷ ಪ್ರಾರ್ಥನೆ ನಡೆದಿದೆ..


ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು ಪ್ರಾಕೃತಿಕ ವಿಕೋಪದಿಂದ ರಕ್ಷಿಸುವಂತೆ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮಾನವ, ಜಾನುವಾರು ಜೀವಹಾನಿಯಾಗಿದ್ದು, ಕೃಷಿ ಕ್ಷೇತ್ರ ಹಾಗೂ ತೋಟಗಳು ಕೊಚ್ಚಿ ಹೋಗಿವೆ. ಭವಿಷ್ಯದ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂದು ಜಿಲ್ಲೆಯ ಜನ ಚಿಂತಾಕ್ರಾಂತರಾಗಿದ್ದಾರೆ. ಈ ರೀತಿಯ ಪರಿಸ್ಥಿತಿ ಮುಂದೆ ಬಾರದಿರಲಿ ಮತ್ತು ಜಿಲ್ಲೆಯ ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಭಕ್ತಸಮೂಹ ಬೇಡಿಕೊಂಡಿತು.

ಕುಲದೇವಿ ಎನಿಸಿರುವ ಕಾವೇರಿ, ಮಹಾಗಣಪತಿ ಮತ್ತು ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಶಾಂತಾಚಾರ್ ಹಾಗೂ ಟಿ.ಎಸ್.ನಾರಾಯಣಾಚಾರ್ ವಿಶೇಷ ಪೂಜೆ ಸಲ್ಲಿಸಿದರು. ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಪ್ರಾರ್ಥಿಸಿದರು.

ಗ್ರಾಮದ ಪ್ರಮುಖರಾದ ಕುದುಕುಳಿ ಭರತ್ ಸೇರಿದಂತೆ ಹಿರಿಯರಾದ ಜಿ.ರಾಜೇಂದ್ರ, ಎಂ.ಬಿ.ದೇವಯ್ಯ ದೇವಿಪೂಣಚ್ಚ, ಕಾಳನರವಿ, ಉಮಾಪ್ರಭು, ಕುದುಪಜೆ ಪಳಂಗಪ್ಪ, ದಾಸಪ್ಪ, ಕುಡಿಯರ ಮುತ್ತಪ್ಪ, ದೇವಂಗೋಡಿ ಹರೀಶ್, ಹೊಸಗದ್ದೆ ಭಾಸ್ಕರ್ ಹಾಗೂ ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

55 minutes ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

8 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

8 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

15 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

17 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago