Advertisement
MIRROR FOCUS

ಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆ

Share

ಮಹಾಮಳೆ  ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ  ವಿಶೇಷ ಪ್ರಾರ್ಥನೆ ನಡೆದಿದೆ..

Advertisement
Advertisement

ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು ಪ್ರಾಕೃತಿಕ ವಿಕೋಪದಿಂದ ರಕ್ಷಿಸುವಂತೆ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು.

Advertisement

ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದ ಮಾನವ, ಜಾನುವಾರು ಜೀವಹಾನಿಯಾಗಿದ್ದು, ಕೃಷಿ ಕ್ಷೇತ್ರ ಹಾಗೂ ತೋಟಗಳು ಕೊಚ್ಚಿ ಹೋಗಿವೆ. ಭವಿಷ್ಯದ ದಿನಗಳಲ್ಲಿ ಜೀವನ ನಡೆಸುವುದು ಹೇಗೆ ಎಂದು ಜಿಲ್ಲೆಯ ಜನ ಚಿಂತಾಕ್ರಾಂತರಾಗಿದ್ದಾರೆ. ಈ ರೀತಿಯ ಪರಿಸ್ಥಿತಿ ಮುಂದೆ ಬಾರದಿರಲಿ ಮತ್ತು ಜಿಲ್ಲೆಯ ಜನ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಭಕ್ತಸಮೂಹ ಬೇಡಿಕೊಂಡಿತು.

ಕುಲದೇವಿ ಎನಿಸಿರುವ ಕಾವೇರಿ, ಮಹಾಗಣಪತಿ ಮತ್ತು ಅಗಸ್ತ್ಯೇಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಪ್ರಶಾಂತಾಚಾರ್ ಹಾಗೂ ಟಿ.ಎಸ್.ನಾರಾಯಣಾಚಾರ್ ವಿಶೇಷ ಪೂಜೆ ಸಲ್ಲಿಸಿದರು. ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ ಅವರು ಪ್ರಾರ್ಥಿಸಿದರು.

Advertisement

ಗ್ರಾಮದ ಪ್ರಮುಖರಾದ ಕುದುಕುಳಿ ಭರತ್ ಸೇರಿದಂತೆ ಹಿರಿಯರಾದ ಜಿ.ರಾಜೇಂದ್ರ, ಎಂ.ಬಿ.ದೇವಯ್ಯ ದೇವಿಪೂಣಚ್ಚ, ಕಾಳನರವಿ, ಉಮಾಪ್ರಭು, ಕುದುಪಜೆ ಪಳಂಗಪ್ಪ, ದಾಸಪ್ಪ, ಕುಡಿಯರ ಮುತ್ತಪ್ಪ, ದೇವಂಗೋಡಿ ಹರೀಶ್, ಹೊಸಗದ್ದೆ ಭಾಸ್ಕರ್ ಹಾಗೂ ಭಕ್ತರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

14 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

19 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

19 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

19 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

19 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

19 hours ago