Advertisement
ಸುದ್ದಿಗಳು

ಮಹಾಮಳೆ ಹಾನಿ : ಕೊಡಗಿನ 7873 ಮಂದಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ

Share

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ. ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಸಂಕಷ್ಟ ಎದುರಾಗಿತ್ತು. ಸದ್ಯದ ಮಾಹಿತಿಯಂತೆ  ಜಿಲ್ಲೆಯಲ್ಲಿ 147 ಮನೆಗಳು ಭಾಗಶಃ ಹಾನಿಯಾಗಿದ್ದು, 90 ಮನೆಗಳು ಪೂರ್ಣ ಹಾನಿಯಾಗಿದೆ. ಮಡಿಕೇರಿ ತಾಲ್ಲೂಕು 32, ವಿರಾಜಪೇಟೆ 42, ಸೋಮವಾರಪೇಟೆ 73 ಮನೆಗಳು ಭಾಗಶಃ ಹಾನಿಯಾಗಿದ್ದು, ಮಡಿಕೇರಿ ತಾ. 15, ವಿರಾಜಪೇಟೆ 41 ಮತ್ತು ಸೋಮವಾರಪೇಟೆಯಲ್ಲಿ 34 ಮನೆಗಳು ಪೂರ್ಣ ಹಾನಿಯಾಗಿವೆ.

ಜಿಲ್ಲೆಯಲ್ಲಿ ಒಟ್ಟು 79 ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ 30, ವಿರಾಜಪೇಟೆ ತಾಲ್ಲೂಕಿನಲ್ಲಿ 32, ಸೋಮವಾರಪೇಟೆ ತಾಲ್ಲೂಕಿನಲ್ಲಿ 4, ಕುಶಾಲನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 8 ಪ್ರವಾಹ ಪೀಡಿತ ಪ್ರದೇಶಗಳಾಗಿವೆ. ಈವರೆಗೆ ಜಿಲ್ಲೆಯಲ್ಲಿ ಸುಮಾರು 1507 ಕ್ಕೂ ಹೆಚ್ಚು ಜನರು ಹಾಗೂ 19 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯದಲ್ಲಿ ಎನ್‍ಡಿಆರ್ ಎಫ್, ಭಾರತೀಯ ಸೇನೆ, ಪೊಲೀಸ್ ಇಲಾಖೆ, ಕಂದಾಯ, ಗ್ರಾಮ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆ ಸಹಕಾರದಲ್ಲಿ ರಕ್ಷಣೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 45 ಪರಿಹಾರ ಕೇಂದ್ರ ತೆರೆಯಲಾಗಿದ್ದು, 2270 ಕುಟುಂಬಗಳ 7873 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಹಾಗೂ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸರಿಪಡಿಸುವ ಕಾರ್ಯ ಜಿಲ್ಲಾಡಳಿತದಿಂದ ನಡೆದಿದೆ. ಅತಿ ವೃಷ್ಟಿಯಿಂದಾಗಬಹುದಾದ ತೊಂದರೆಯನ್ನು ಎದುರಿಸಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ.
ಜಿಲ್ಲೆಯ ಒಟ್ಟು 6 ರಸ್ತೆಗಳು ಭೂಕುಸಿತ ಹಾಗೂ ಪ್ರವಾಹದಿಂದ ಬಂದ್ ಆಗಿವೆ. ಮಡಿಕೇರಿ-ವಿರಾಜಪೇಟೆ, ಸಿದ್ದಾಪುರ-ಕರಡಿಗೋಡು, ಮಡಿಕೇರಿ-ವಿರಾಜಪೇಟೆ-ಮಾಕುಟ್ಟ, ಮೂರ್ನಾಡು-ನಾಪೋಕ್ಲು, ಸಿದ್ದಾಪುರ-ಕೊಂಡಂಗೇರಿ, ಗಾಳಿಬೀಡು-ಪಾಟಿ-ಕಾಲೂರು ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

43 minutes ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

6 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

7 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

14 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

14 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago