Advertisement
ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಪಕ್ಷಗಳ ತುರ್ತು ಸಭೆ

Share

ನವದೆಹಲಿ:ಮಹಾರಾಷ್ಟ್ರದಲ್ಲಿ  ರಾಜಕೀಯ ಬಿಕ್ಕಟ್ಟು ಪರಿಗಣಿಸಿ ರಾಜ್ಯಪಾಲರ ವರದಿಯನ್ನು ಪರಿಶೀಲಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಅನುಮೋದನೆ ನೀಡಿದ್ದು, ಇದರಿಂದ ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವಾಗಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದ್ದು ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟಗಳು ಸರಕಾರ ರಚನೆಗೆ ಮುಂದಾಗಿಲ್ಲ. ಈ ಕಾರಣಕ್ಕಾಗಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಮಧ್ಯಾಹ್ನ ಶಿಫಾರಸು ಮಾಡಿದ್ದರು.

ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್‌ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು  ಚರ್ಚೆಗೆ ಗ್ರಾಸವಾಗಿದೆ.

ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.

ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

10 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

11 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

11 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

17 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

19 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

19 hours ago