Advertisement
ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಪಕ್ಷಗಳ ತುರ್ತು ಸಭೆ

Share

ನವದೆಹಲಿ:ಮಹಾರಾಷ್ಟ್ರದಲ್ಲಿ  ರಾಜಕೀಯ ಬಿಕ್ಕಟ್ಟು ಪರಿಗಣಿಸಿ ರಾಜ್ಯಪಾಲರ ವರದಿಯನ್ನು ಪರಿಶೀಲಿಸಿದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್  ಅನುಮೋದನೆ ನೀಡಿದ್ದು, ಇದರಿಂದ ಮಹಾರಾಷ್ಟ್ರದಲ್ಲಿ ಅಧಿಕೃತವಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವಾಗಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದ್ದು ರಾಜ್ಯದಲ್ಲಿ ಯಾವುದೇ ಪಕ್ಷ ಅಥವಾ ಮೈತ್ರಿಕೂಟಗಳು ಸರಕಾರ ರಚನೆಗೆ ಮುಂದಾಗಿಲ್ಲ. ಈ ಕಾರಣಕ್ಕಾಗಿ ರಾಷ್ಟ್ರಪತಿಗಳ ಆಳ್ವಿಕೆ ಜಾರಿ ಮಾಡುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಮಂಗಳವಾರ ಮಧ್ಯಾಹ್ನ ಶಿಫಾರಸು ಮಾಡಿದ್ದರು.

ಸರಕಾರ ರಚನೆಗೆ ಹಕ್ಕು ಮಂಡಿಸುವಂತೆ ಮೂರನೇ ಅತಿ ದೊಡ್ಡ ಪಕ್ಷವಾದ ಎನ್‌ಸಿಪಿಗೆ ರಾಜ್ಯಪಾಲರು ಸೋಮವಾರ ಆಹ್ವಾನ ನೀಡಿದ್ದರು. ಇದರ ಗಡುವು ಮಂಗಳವಾರ ರಾತ್ರಿ 8.30ಕ್ಕೆ ಮುಗಿಯುತ್ತಿತ್ತು. ಆದರೆ ಈ ಅವಧಿ ಮುಗಿಯುವ ಮೊದಲೇ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿರುವುದು  ಚರ್ಚೆಗೆ ಗ್ರಾಸವಾಗಿದೆ.

ಇದರ ವಿರುದ್ದ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಶಿವಸೇವಾ ಹೇಳಿದೆ.

ಈ ನಡುವೆ ಕಾಂಗ್ರೆಸ್ ಬಾಹ್ಯ ಬೆಂಬಲ ನೀಡಿ ಶಿವಸೇವಾ ಹಾಗೂ ಎನ್ ಸಿ ಪಿ ಮುಖ್ಯಮಂತ್ರಿ ಸ್ಥಾನವನ್ನು ಸಮಾನ ಅವಧಿಗೆ ಹಂಚಿಕೊಳ್ಳುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೀಗ ಎನ್ ಸಿ ಪಿ ಹಾಗೂ ಕಾಂಗ್ರೆಸ್ ಜಂಟಿ ಸಭೆ ನಡೆಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago