ಮಹಾರಾಷ್ಟ್ರದಲ್ಲಿ 3 ದಿನದ ಸರಕಾರ “ಮಹಾ”ಪತನ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಮಂಗಳಾರತಿ

November 26, 2019
8:20 PM

ಸುಳ್ಯ: ಮಹಾರಾಷ್ಟ್ರದಲ್ಲಿ  ಬಿಜೆಪಿ  ಹಾಗೂ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ಒಪ್ಪಂದದೊಂದಿಗೆ ರಚನೆಯಾದ  ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡುವ ಮೂಲಕ ಸರಕಾರ ಪತನವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಸಾರ್ವಜನಿಕರು ವ್ಯಂಗ್ಯ ಮಾಡುತ್ತಿದ್ದು , ಸಿದ್ಧಾಂತ ಪಕ್ಷದಲ್ಲಿ  ಹೀಗೇಕೆ ಎಂಬ ವ್ಯಂಗ್ಯ ಕಾಣುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ  ಬಿಜೆಪಿಗೆ, ಬಿಜೆಪಿ ಸಿದ್ಧಾಂತಗಳನ್ನು  ವ್ಯಂಗ್ಯ ಮಾಡುವ ಸ್ಥಿತಿಯಾಗಿದೆ. ಅದರಲ್ಲಿ,  ಬಿಜೆಪಿ ಜೊತೆ ಸಖ್ಯ ಮಾಡಿದ ಬಳಿಕ ಈಗ ನೀರಾವರಿ ಹಗರಣ ಕೇಸಿನಲ್ಲಿ ಒಂದೇ ದಿನದಲ್ಲಿ ಪರಿಶುದ್ಧರಾಗಿ ಹೊರಬಂದಿರುವ ಅಜಿತ್ ಪವಾರ್ ಪರಮ ಪವಿತ್ರರಾಗಿಯೇ ಉಳಿಯುವರೇ? ಎಂಬ ಪ್ರಶ್ನೆಯೊಂದು ಶೇರ್ ಆದರೆ,  ಅಧಿಕಾರಕ್ಕೆ ಅಂಟಿ ಕೂರದ ಆದರ್ಶವಾದಿ ದೇವೇಂದ್ರ ಎಂಬುದು ಅಂತ ಇನ್ನೂ ಯಾರೂ ಹೇಳಿಲ್ವಾ ಎಂಬುದು  ಇನ್ನೊಂದು ಟ್ರೋಲ್, ಚಾಣಕ್ಯನ ಕೈಗೆಟುಕದ ಮಹಾ ಕುದುರೆಗಳು  ಎಂದು ಮತ್ತೊಂದು ಟ್ರೋಲ್ ಕಾಣುತ್ತಿದೆ. ಒಟ್ಟಿನಲ್ಲಿ  ಬಿಜೆಪಿಗೂ ಅಧಿಕಾರವೇ ಮುಖ್ಯ ಎಂಬುದು  ಈಗ ಸಾಮಾಜಿಕ ಜಾಲತಾಣದಲ್ಲಿ  ವ್ಯಕ್ತವಾಗುವ ಅಭಿಪ್ರಾಯ.
ಶಿವಸೇನೆ ಅಧಿಕಾರಕ್ಕಾಗಿ ತನ್ನ ಸಿದ್ಧಾಂತಗಳನ್ನು ಬಿಟ್ಟು ಕಾಂಗ್ರೆಸ್, ಎನ್ ಸಿ ಪಿ ಜೊತೆ ಸೇರಿಕೊಂಡಿದೆ ಎನ್ನುತ್ತಾ ಬಿಜೆಪಿಯೂ ಅದೇ ಹಾದಿಯಲ್ಲಿ  ಸಾಗಿ ಅಧಿಕಾರವೇ ಮುಖ್ಯವೆಂದು  ಹೇಳಿದೆ ಎಂಬುದು ಒಂದು ಕಡೆ ಕೇಳಿಬಂದರೆ, ಮಹಾರಾಷ್ಟ್ರ ರಾಜಕೀಯದಲ್ಲಿ  ಹೊಸದೊಂದು ಶಕೆ ಆರಂಭವಾಗಲಿದೆ ಎಂಬುದೂ ಕೇಳಿಬರುವ ಇನ್ನೊಂದು ವಿಶ್ಲೇಷಣೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ
August 30, 2026
10:38 PM
by: ದ ರೂರಲ್ ಮಿರರ್.ಕಾಂ
ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ
August 30, 2026
10:18 PM
by: ದ ರೂರಲ್ ಮಿರರ್.ಕಾಂ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ
August 30, 2026
10:09 PM
by: ದ ರೂರಲ್ ಮಿರರ್.ಕಾಂ
ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?
August 30, 2026
11:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror