ಸುದ್ದಿಗಳು

ಮಹಾರಾಷ್ಟ್ರದಲ್ಲಿ 3 ದಿನದ ಸರಕಾರ “ಮಹಾ”ಪತನ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಮಂಗಳಾರತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮಹಾರಾಷ್ಟ್ರದಲ್ಲಿ  ಬಿಜೆಪಿ  ಹಾಗೂ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ಒಪ್ಪಂದದೊಂದಿಗೆ ರಚನೆಯಾದ  ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡುವ ಮೂಲಕ ಸರಕಾರ ಪತನವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಸಾರ್ವಜನಿಕರು ವ್ಯಂಗ್ಯ ಮಾಡುತ್ತಿದ್ದು , ಸಿದ್ಧಾಂತ ಪಕ್ಷದಲ್ಲಿ  ಹೀಗೇಕೆ ಎಂಬ ವ್ಯಂಗ್ಯ ಕಾಣುತ್ತಿದೆ.

Advertisement

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ  ಬಿಜೆಪಿಗೆ, ಬಿಜೆಪಿ ಸಿದ್ಧಾಂತಗಳನ್ನು  ವ್ಯಂಗ್ಯ ಮಾಡುವ ಸ್ಥಿತಿಯಾಗಿದೆ. ಅದರಲ್ಲಿ,  ಬಿಜೆಪಿ ಜೊತೆ ಸಖ್ಯ ಮಾಡಿದ ಬಳಿಕ ಈಗ ನೀರಾವರಿ ಹಗರಣ ಕೇಸಿನಲ್ಲಿ ಒಂದೇ ದಿನದಲ್ಲಿ ಪರಿಶುದ್ಧರಾಗಿ ಹೊರಬಂದಿರುವ ಅಜಿತ್ ಪವಾರ್ ಪರಮ ಪವಿತ್ರರಾಗಿಯೇ ಉಳಿಯುವರೇ? ಎಂಬ ಪ್ರಶ್ನೆಯೊಂದು ಶೇರ್ ಆದರೆ,  ಅಧಿಕಾರಕ್ಕೆ ಅಂಟಿ ಕೂರದ ಆದರ್ಶವಾದಿ ದೇವೇಂದ್ರ ಎಂಬುದು ಅಂತ ಇನ್ನೂ ಯಾರೂ ಹೇಳಿಲ್ವಾ ಎಂಬುದು  ಇನ್ನೊಂದು ಟ್ರೋಲ್, ಚಾಣಕ್ಯನ ಕೈಗೆಟುಕದ ಮಹಾ ಕುದುರೆಗಳು  ಎಂದು ಮತ್ತೊಂದು ಟ್ರೋಲ್ ಕಾಣುತ್ತಿದೆ. ಒಟ್ಟಿನಲ್ಲಿ  ಬಿಜೆಪಿಗೂ ಅಧಿಕಾರವೇ ಮುಖ್ಯ ಎಂಬುದು  ಈಗ ಸಾಮಾಜಿಕ ಜಾಲತಾಣದಲ್ಲಿ  ವ್ಯಕ್ತವಾಗುವ ಅಭಿಪ್ರಾಯ.
ಶಿವಸೇನೆ ಅಧಿಕಾರಕ್ಕಾಗಿ ತನ್ನ ಸಿದ್ಧಾಂತಗಳನ್ನು ಬಿಟ್ಟು ಕಾಂಗ್ರೆಸ್, ಎನ್ ಸಿ ಪಿ ಜೊತೆ ಸೇರಿಕೊಂಡಿದೆ ಎನ್ನುತ್ತಾ ಬಿಜೆಪಿಯೂ ಅದೇ ಹಾದಿಯಲ್ಲಿ  ಸಾಗಿ ಅಧಿಕಾರವೇ ಮುಖ್ಯವೆಂದು  ಹೇಳಿದೆ ಎಂಬುದು ಒಂದು ಕಡೆ ಕೇಳಿಬಂದರೆ, ಮಹಾರಾಷ್ಟ್ರ ರಾಜಕೀಯದಲ್ಲಿ  ಹೊಸದೊಂದು ಶಕೆ ಆರಂಭವಾಗಲಿದೆ ಎಂಬುದೂ ಕೇಳಿಬರುವ ಇನ್ನೊಂದು ವಿಶ್ಲೇಷಣೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

7 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

22 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

22 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

22 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

22 hours ago