Advertisement
ಸುದ್ದಿಗಳು

ಮಹಾರಾಷ್ಟ್ರದಲ್ಲಿ 3 ದಿನದ ಸರಕಾರ “ಮಹಾ”ಪತನ : ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಮಂಗಳಾರತಿ

Share

ಸುಳ್ಯ: ಮಹಾರಾಷ್ಟ್ರದಲ್ಲಿ  ಬಿಜೆಪಿ  ಹಾಗೂ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ಒಪ್ಪಂದದೊಂದಿಗೆ ರಚನೆಯಾದ  ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾದ ದೇವೇಂದ್ರ ಫಡ್ನವೀಸ್ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡುವ ಮೂಲಕ ಸರಕಾರ ಪತನವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಗೆ ಸಾರ್ವಜನಿಕರು ವ್ಯಂಗ್ಯ ಮಾಡುತ್ತಿದ್ದು , ಸಿದ್ಧಾಂತ ಪಕ್ಷದಲ್ಲಿ  ಹೀಗೇಕೆ ಎಂಬ ವ್ಯಂಗ್ಯ ಕಾಣುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ  ಬಿಜೆಪಿಗೆ, ಬಿಜೆಪಿ ಸಿದ್ಧಾಂತಗಳನ್ನು  ವ್ಯಂಗ್ಯ ಮಾಡುವ ಸ್ಥಿತಿಯಾಗಿದೆ. ಅದರಲ್ಲಿ,  ಬಿಜೆಪಿ ಜೊತೆ ಸಖ್ಯ ಮಾಡಿದ ಬಳಿಕ ಈಗ ನೀರಾವರಿ ಹಗರಣ ಕೇಸಿನಲ್ಲಿ ಒಂದೇ ದಿನದಲ್ಲಿ ಪರಿಶುದ್ಧರಾಗಿ ಹೊರಬಂದಿರುವ ಅಜಿತ್ ಪವಾರ್ ಪರಮ ಪವಿತ್ರರಾಗಿಯೇ ಉಳಿಯುವರೇ? ಎಂಬ ಪ್ರಶ್ನೆಯೊಂದು ಶೇರ್ ಆದರೆ,  ಅಧಿಕಾರಕ್ಕೆ ಅಂಟಿ ಕೂರದ ಆದರ್ಶವಾದಿ ದೇವೇಂದ್ರ ಎಂಬುದು ಅಂತ ಇನ್ನೂ ಯಾರೂ ಹೇಳಿಲ್ವಾ ಎಂಬುದು  ಇನ್ನೊಂದು ಟ್ರೋಲ್, ಚಾಣಕ್ಯನ ಕೈಗೆಟುಕದ ಮಹಾ ಕುದುರೆಗಳು  ಎಂದು ಮತ್ತೊಂದು ಟ್ರೋಲ್ ಕಾಣುತ್ತಿದೆ. ಒಟ್ಟಿನಲ್ಲಿ  ಬಿಜೆಪಿಗೂ ಅಧಿಕಾರವೇ ಮುಖ್ಯ ಎಂಬುದು  ಈಗ ಸಾಮಾಜಿಕ ಜಾಲತಾಣದಲ್ಲಿ  ವ್ಯಕ್ತವಾಗುವ ಅಭಿಪ್ರಾಯ.
ಶಿವಸೇನೆ ಅಧಿಕಾರಕ್ಕಾಗಿ ತನ್ನ ಸಿದ್ಧಾಂತಗಳನ್ನು ಬಿಟ್ಟು ಕಾಂಗ್ರೆಸ್, ಎನ್ ಸಿ ಪಿ ಜೊತೆ ಸೇರಿಕೊಂಡಿದೆ ಎನ್ನುತ್ತಾ ಬಿಜೆಪಿಯೂ ಅದೇ ಹಾದಿಯಲ್ಲಿ  ಸಾಗಿ ಅಧಿಕಾರವೇ ಮುಖ್ಯವೆಂದು  ಹೇಳಿದೆ ಎಂಬುದು ಒಂದು ಕಡೆ ಕೇಳಿಬಂದರೆ, ಮಹಾರಾಷ್ಟ್ರ ರಾಜಕೀಯದಲ್ಲಿ  ಹೊಸದೊಂದು ಶಕೆ ಆರಂಭವಾಗಲಿದೆ ಎಂಬುದೂ ಕೇಳಿಬರುವ ಇನ್ನೊಂದು ವಿಶ್ಲೇಷಣೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

4 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

24 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago