ಸುದ್ದಿಗಳು

ಮಹಾರಾಷ್ಟ್ರದಲ್ಲಿ ಪೊಲೀಸರ ಎದುರೇ ಇಬ್ಬರು ಸಂತರ ಬರ್ಬರವಾಗಿ ಹತ್ಯೆ | ಹಿಂದೂ ಜನಜಾಗೃತಿ ಸಮಿತಿ ಖಂಡನೆ | ಅಪರಾಧಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮಹಾರಾಷ್ಟ್ರದ  ಪಾಲಘರದಲ್ಲಿ ‘ಶ್ರೀ ಪಂಚ ದಶನಾಮ ಜುನಾ ಆಖಾಡಾ’ದ ಸಂತ ಕಲ್ಪವೃಕ್ಷಗಿರಿ ಮಹಾರಾಜ ಹಾಗೂ ಸುಶೀಲಗಿರಿ ಮಹಾರಾಜ  ಹಾಗೂ ಅವರ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ  ಪೊಲೀಸರ ಎದುರೇ ತೀವ್ರವಾಗಿ ಥಳಿಸಿ ಸಂತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಖಂಡನೀಯವಾಗಿದ್ದು ತಕ್ಷಣವೇ ಪೊಲೀಸರ ಸಹಿತ ಅಪರಾಧಿಗಳ ಮೇಲೆ ಸೂಕ್ತ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಒತ್ತಾಯಿಸಿದ್ದಾರೆ.

Advertisement
Advertisement

ಹಲ್ಲೆಯ ವಿಡಿಯೋ ಬಹಿರಂಗಗೊಂಡಿದ್ದು ಅದರಲ್ಲಿ ಒಂದು ವಿಡಿಯೋದಲ್ಲಿ ಪೊಲೀಸರೇ ಆ ವೃದ್ಧ ಸಂತರನ್ನು ಹಿಂಸಾತ್ಮಕ ಸಮೂಹದವರಿಗೆ ಒಪ್ಪಿಸುತ್ತಿರುವ ಹಾಗೂ ಪೊಲೀಸರ ಎದುರೇ ಅವರ ಬರ್ಬರವಾಗಿ ಹತ್ಯೆಯಾಗುತ್ತಿರುವ ಭಯಾನಕ ಸತ್ಯವು ಬಹಿರಂಗವಾಗಿದೆ.  ಈ ಹಿಂದೆಯೂ ಮಹಾರಾಷ್ಟ್ರದ ಠಾಣೆ ಎಂಬಲ್ಲಿ ಪೊಲೀಸರು ಓರ್ವ ಹಿಂದುತ್ವವಾದಿಯನ್ನು ಆತನ ಮನೆಯಿಂದ ಕರೆದೊಯ್ದು ಮಂತ್ರಿಯ ಬಂಗಲೆಯಲ್ಲಿ ಅಮಾನುಷವಾಗಿ ಥಳಿಸಿದ ಬಗ್ಗೆ ಬಹಿರಂಗವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ.  ಈ ಘಟನೆಯು ಸಂತರ ಭೂಮಿ ಎಂದೇ ಹೇಳಲಾಗುವ ಮಹಾರಾಷ್ಟ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಪದೇ ಪದೇ ಹಿಂದೂಗಳನ್ನು ಗುರಿಯಾಗಿಸುವ ಹಿಂಸಾತ್ಮಕ ಘಟನೆಯನ್ನು ತಡೆಗಟ್ಟಲು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಿದೆ. ಪಾಲಘರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯನ್ನು ಮಾಡಿ ಆರೋಪಿಯಾಗಿರುವ ಹಿಂಸಾತ್ಮಕ ಸಮೂಹ ಸಹಿತ ಸಂಬಂಧಪಟ್ಟ ಪೊಲೀಸರ ಮೇಲೆಯೂ  ಅಪರಾಧವನ್ನು ದಾಖಲಿಸಬೇಕು, ಅದೇರೀತಿ ದೋಷಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು, ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

7 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

8 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

8 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

9 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

14 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

22 hours ago