Advertisement
ಸುದ್ದಿಗಳು

ಮಹಾರಾಷ್ಟ್ರದಲ್ಲಿ ಪೊಲೀಸರ ಎದುರೇ ಇಬ್ಬರು ಸಂತರ ಬರ್ಬರವಾಗಿ ಹತ್ಯೆ | ಹಿಂದೂ ಜನಜಾಗೃತಿ ಸಮಿತಿ ಖಂಡನೆ | ಅಪರಾಧಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯ

Share

ಮಂಗಳೂರು: ಮಹಾರಾಷ್ಟ್ರದ  ಪಾಲಘರದಲ್ಲಿ ‘ಶ್ರೀ ಪಂಚ ದಶನಾಮ ಜುನಾ ಆಖಾಡಾ’ದ ಸಂತ ಕಲ್ಪವೃಕ್ಷಗಿರಿ ಮಹಾರಾಜ ಹಾಗೂ ಸುಶೀಲಗಿರಿ ಮಹಾರಾಜ  ಹಾಗೂ ಅವರ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ  ಪೊಲೀಸರ ಎದುರೇ ತೀವ್ರವಾಗಿ ಥಳಿಸಿ ಸಂತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಖಂಡನೀಯವಾಗಿದ್ದು ತಕ್ಷಣವೇ ಪೊಲೀಸರ ಸಹಿತ ಅಪರಾಧಿಗಳ ಮೇಲೆ ಸೂಕ್ತ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಹಲ್ಲೆಯ ವಿಡಿಯೋ ಬಹಿರಂಗಗೊಂಡಿದ್ದು ಅದರಲ್ಲಿ ಒಂದು ವಿಡಿಯೋದಲ್ಲಿ ಪೊಲೀಸರೇ ಆ ವೃದ್ಧ ಸಂತರನ್ನು ಹಿಂಸಾತ್ಮಕ ಸಮೂಹದವರಿಗೆ ಒಪ್ಪಿಸುತ್ತಿರುವ ಹಾಗೂ ಪೊಲೀಸರ ಎದುರೇ ಅವರ ಬರ್ಬರವಾಗಿ ಹತ್ಯೆಯಾಗುತ್ತಿರುವ ಭಯಾನಕ ಸತ್ಯವು ಬಹಿರಂಗವಾಗಿದೆ.  ಈ ಹಿಂದೆಯೂ ಮಹಾರಾಷ್ಟ್ರದ ಠಾಣೆ ಎಂಬಲ್ಲಿ ಪೊಲೀಸರು ಓರ್ವ ಹಿಂದುತ್ವವಾದಿಯನ್ನು ಆತನ ಮನೆಯಿಂದ ಕರೆದೊಯ್ದು ಮಂತ್ರಿಯ ಬಂಗಲೆಯಲ್ಲಿ ಅಮಾನುಷವಾಗಿ ಥಳಿಸಿದ ಬಗ್ಗೆ ಬಹಿರಂಗವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ.  ಈ ಘಟನೆಯು ಸಂತರ ಭೂಮಿ ಎಂದೇ ಹೇಳಲಾಗುವ ಮಹಾರಾಷ್ಟ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಪದೇ ಪದೇ ಹಿಂದೂಗಳನ್ನು ಗುರಿಯಾಗಿಸುವ ಹಿಂಸಾತ್ಮಕ ಘಟನೆಯನ್ನು ತಡೆಗಟ್ಟಲು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಿದೆ. ಪಾಲಘರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯನ್ನು ಮಾಡಿ ಆರೋಪಿಯಾಗಿರುವ ಹಿಂಸಾತ್ಮಕ ಸಮೂಹ ಸಹಿತ ಸಂಬಂಧಪಟ್ಟ ಪೊಲೀಸರ ಮೇಲೆಯೂ  ಅಪರಾಧವನ್ನು ದಾಖಲಿಸಬೇಕು, ಅದೇರೀತಿ ದೋಷಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು, ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

4 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

5 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

14 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

20 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

21 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago