ಮಂಗಳೂರು: ಮಹಾರಾಷ್ಟ್ರದ ಪಾಲಘರದಲ್ಲಿ ‘ಶ್ರೀ ಪಂಚ ದಶನಾಮ ಜುನಾ ಆಖಾಡಾ’ದ ಸಂತ ಕಲ್ಪವೃಕ್ಷಗಿರಿ ಮಹಾರಾಜ ಹಾಗೂ ಸುಶೀಲಗಿರಿ ಮಹಾರಾಜ ಹಾಗೂ ಅವರ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ ಪೊಲೀಸರ ಎದುರೇ ತೀವ್ರವಾಗಿ ಥಳಿಸಿ ಸಂತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಖಂಡನೀಯವಾಗಿದ್ದು ತಕ್ಷಣವೇ ಪೊಲೀಸರ ಸಹಿತ ಅಪರಾಧಿಗಳ ಮೇಲೆ ಸೂಕ್ತ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಒತ್ತಾಯಿಸಿದ್ದಾರೆ.
ಹಲ್ಲೆಯ ವಿಡಿಯೋ ಬಹಿರಂಗಗೊಂಡಿದ್ದು ಅದರಲ್ಲಿ ಒಂದು ವಿಡಿಯೋದಲ್ಲಿ ಪೊಲೀಸರೇ ಆ ವೃದ್ಧ ಸಂತರನ್ನು ಹಿಂಸಾತ್ಮಕ ಸಮೂಹದವರಿಗೆ ಒಪ್ಪಿಸುತ್ತಿರುವ ಹಾಗೂ ಪೊಲೀಸರ ಎದುರೇ ಅವರ ಬರ್ಬರವಾಗಿ ಹತ್ಯೆಯಾಗುತ್ತಿರುವ ಭಯಾನಕ ಸತ್ಯವು ಬಹಿರಂಗವಾಗಿದೆ. ಈ ಹಿಂದೆಯೂ ಮಹಾರಾಷ್ಟ್ರದ ಠಾಣೆ ಎಂಬಲ್ಲಿ ಪೊಲೀಸರು ಓರ್ವ ಹಿಂದುತ್ವವಾದಿಯನ್ನು ಆತನ ಮನೆಯಿಂದ ಕರೆದೊಯ್ದು ಮಂತ್ರಿಯ ಬಂಗಲೆಯಲ್ಲಿ ಅಮಾನುಷವಾಗಿ ಥಳಿಸಿದ ಬಗ್ಗೆ ಬಹಿರಂಗವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ. ಈ ಘಟನೆಯು ಸಂತರ ಭೂಮಿ ಎಂದೇ ಹೇಳಲಾಗುವ ಮಹಾರಾಷ್ಟ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಪದೇ ಪದೇ ಹಿಂದೂಗಳನ್ನು ಗುರಿಯಾಗಿಸುವ ಹಿಂಸಾತ್ಮಕ ಘಟನೆಯನ್ನು ತಡೆಗಟ್ಟಲು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಿದೆ. ಪಾಲಘರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯನ್ನು ಮಾಡಿ ಆರೋಪಿಯಾಗಿರುವ ಹಿಂಸಾತ್ಮಕ ಸಮೂಹ ಸಹಿತ ಸಂಬಂಧಪಟ್ಟ ಪೊಲೀಸರ ಮೇಲೆಯೂ ಅಪರಾಧವನ್ನು ದಾಖಲಿಸಬೇಕು, ಅದೇರೀತಿ ದೋಷಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು, ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…
ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…
ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…