Advertisement
ಸುದ್ದಿಗಳು

ಮಹಾರಾಷ್ಟ್ರದಲ್ಲಿ ಪೊಲೀಸರ ಎದುರೇ ಇಬ್ಬರು ಸಂತರ ಬರ್ಬರವಾಗಿ ಹತ್ಯೆ | ಹಿಂದೂ ಜನಜಾಗೃತಿ ಸಮಿತಿ ಖಂಡನೆ | ಅಪರಾಧಿಗಳ ಮೇಲೆ ಕಠಿಣ ಕ್ರಮಕ್ಕೆ ಒತ್ತಾಯ

Share

ಮಂಗಳೂರು: ಮಹಾರಾಷ್ಟ್ರದ  ಪಾಲಘರದಲ್ಲಿ ‘ಶ್ರೀ ಪಂಚ ದಶನಾಮ ಜುನಾ ಆಖಾಡಾ’ದ ಸಂತ ಕಲ್ಪವೃಕ್ಷಗಿರಿ ಮಹಾರಾಜ ಹಾಗೂ ಸುಶೀಲಗಿರಿ ಮಹಾರಾಜ  ಹಾಗೂ ಅವರ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿದ್ದೂ ಅಲ್ಲದೆ  ಪೊಲೀಸರ ಎದುರೇ ತೀವ್ರವಾಗಿ ಥಳಿಸಿ ಸಂತರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆ ಖಂಡನೀಯವಾಗಿದ್ದು ತಕ್ಷಣವೇ ಪೊಲೀಸರ ಸಹಿತ ಅಪರಾಧಿಗಳ ಮೇಲೆ ಸೂಕ್ತ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಹಲ್ಲೆಯ ವಿಡಿಯೋ ಬಹಿರಂಗಗೊಂಡಿದ್ದು ಅದರಲ್ಲಿ ಒಂದು ವಿಡಿಯೋದಲ್ಲಿ ಪೊಲೀಸರೇ ಆ ವೃದ್ಧ ಸಂತರನ್ನು ಹಿಂಸಾತ್ಮಕ ಸಮೂಹದವರಿಗೆ ಒಪ್ಪಿಸುತ್ತಿರುವ ಹಾಗೂ ಪೊಲೀಸರ ಎದುರೇ ಅವರ ಬರ್ಬರವಾಗಿ ಹತ್ಯೆಯಾಗುತ್ತಿರುವ ಭಯಾನಕ ಸತ್ಯವು ಬಹಿರಂಗವಾಗಿದೆ.  ಈ ಹಿಂದೆಯೂ ಮಹಾರಾಷ್ಟ್ರದ ಠಾಣೆ ಎಂಬಲ್ಲಿ ಪೊಲೀಸರು ಓರ್ವ ಹಿಂದುತ್ವವಾದಿಯನ್ನು ಆತನ ಮನೆಯಿಂದ ಕರೆದೊಯ್ದು ಮಂತ್ರಿಯ ಬಂಗಲೆಯಲ್ಲಿ ಅಮಾನುಷವಾಗಿ ಥಳಿಸಿದ ಬಗ್ಗೆ ಬಹಿರಂಗವಾಗಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ.  ಈ ಘಟನೆಯು ಸಂತರ ಭೂಮಿ ಎಂದೇ ಹೇಳಲಾಗುವ ಮಹಾರಾಷ್ಟ್ರಕ್ಕೆ ಕಪ್ಪುಚುಕ್ಕೆಯಾಗಿದೆ. ಪದೇ ಪದೇ ಹಿಂದೂಗಳನ್ನು ಗುರಿಯಾಗಿಸುವ ಹಿಂಸಾತ್ಮಕ ಘಟನೆಯನ್ನು ತಡೆಗಟ್ಟಲು ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವುದು ಅಗತ್ಯವಿದೆ. ಪಾಲಘರ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಯನ್ನು ಮಾಡಿ ಆರೋಪಿಯಾಗಿರುವ ಹಿಂಸಾತ್ಮಕ ಸಮೂಹ ಸಹಿತ ಸಂಬಂಧಪಟ್ಟ ಪೊಲೀಸರ ಮೇಲೆಯೂ  ಅಪರಾಧವನ್ನು ದಾಖಲಿಸಬೇಕು, ಅದೇರೀತಿ ದೋಷಿ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು, ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

1 hour ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

2 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

13 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

13 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

18 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

19 hours ago