ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ನ.28 ರಂದು ಪ್ರಮಾಣವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭ ಏಕನಾಥ್ ಸಂಭಾಜಿ ಶಿಂಧೆ, ಸುಭಾಷ್ ರಾಜಾರಾಂ ದೇಸಾಯಿ, ಬಾಳಾಸಾಹೇಬ್ ಥೋರಟ್, ನಿತಿನ್ ರಾವತ್, ಜಯಂತ್ ಪಾಟೀಲ್, ಛಗನ್ ಭುಜಬಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಬಾಳಾ ಠಾಕ್ರೆ ಕುಟುಂಬದ ಮೊದಲ ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕಾರಕ್ಕಾಗಿ ಶಿವಾಜಿ ಪಾರ್ಕ್ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು.
ಸಮಾರಂಭದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್.ಬಾಲು, ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್, ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್, ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಪತ್ನಿ ಸೇರಿ ಸೇರಿ ಅನೇಕರು ಭಾಗವಹಿಸಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…