ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ನ.28 ರಂದು ಪ್ರಮಾಣವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭ ಏಕನಾಥ್ ಸಂಭಾಜಿ ಶಿಂಧೆ, ಸುಭಾಷ್ ರಾಜಾರಾಂ ದೇಸಾಯಿ, ಬಾಳಾಸಾಹೇಬ್ ಥೋರಟ್, ನಿತಿನ್ ರಾವತ್, ಜಯಂತ್ ಪಾಟೀಲ್, ಛಗನ್ ಭುಜಬಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಮುಂಬೈನ ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಉದ್ಧವ್ ಠಾಕ್ರೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಬಾಳಾ ಠಾಕ್ರೆ ಕುಟುಂಬದ ಮೊದಲ ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ಪ್ರಮಾಣವಚನ ಸ್ವೀಕಾರಕ್ಕಾಗಿ ಶಿವಾಜಿ ಪಾರ್ಕ್ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು.
ಸಮಾರಂಭದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ಡಿಎಂಕೆ ನಾಯಕ ಟಿ.ಆರ್.ಬಾಲು, ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್, ಎನ್ಸಿಪಿ ಮುಖಂಡ ಪ್ರಫುಲ್ ಪಟೇಲ್, ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಪತ್ನಿ ಸೇರಿ ಸೇರಿ ಅನೇಕರು ಭಾಗವಹಿಸಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…