Advertisement
Political mirror

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Share

ಮುಂಬೈ: ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು , ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜಿನಾಮೆ ನೀಡಿದ್ದಾರೆ. ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

 

ಅಜಿತ್ ಪವಾರ್

 

ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು. ಬಹುಮತ ಸಾಬೀತಿಗೆ ಮೊದಲೇ ಮುಖ್ಯಮಂತ್ರಿ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಸಿಕ್ಕಿದೆ. ಆದರೆ ನಾವು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದ್ದರಿಂದ ಕೆಲವು ಸೀಟುಗಳ ಕೊರತೆ ಉಂಟಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದರೆ ಅದರ ಕಥೆ ಬೇರೆನೇ ಇರುತ್ತಿತ್ತು. ಫಲಿತಾಂಶದ ಬಳಿಕ ಶಿವಸೇನೆ ಅಧಿಕಾರ ಹಂಚಿಕೆಯ ಪ್ರಸ್ತಾಪ ಮಾಡಿತು. ಆದರೆ ಯಾವತ್ತೂ ಶಿವಸೇನೆಗೆ ಅಂತಹ ಭರವಸೆಯನ್ನು ನಾವು ನೀಡಿರಲಿಲ್ಲ ಎಂದು ಹೇಳಿದರು.

ನಾವು ಅಜಿತ್ ಪವಾರ್​ ಬೆಂಬಲ ನೀಡಿದ್ದನ್ನು ನೋಡಿ ಇಡೀ ಎನ್​ಸಿಪಿ ಪಕ್ಷ ನಮ್ಮೊಂದಿಗೆ ಇದೆ ಎಂದು ಭಾವಿಸಿದೆವು. ಆದರೆ ಹಾಗಾಗಲಿಲ್ಲ. ನಮಗೆ ಸಂಖ್ಯೆಯ ಕೊರತೆ ಇದೆ. ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ಎನ್​ಸಿಪಿಯ ಅಜಿತ್​ ಪವಾರ್​ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ದೇವೇಂದ್ರ ಫಡ್ನವೀಸ್​ ಹಾಗೂ ಅಜಿತ್ ಪವಾರ್​ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ರಾತ್ರೋರಾತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು. ಎರಡು ದಿನಗಳ ವಿಚಾರಣೆಯ ಬಳಿಕ, ನ.27 ಸಂಜೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಮಹಾ ಸರ್ಕಾರಕ್ಕೆ ಸುಪ್ರೀಂ ಆದೇಶ ನೀಡಿತ್ತು. ಸುಪ್ರೀಂ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್​ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಎಂ ಸ್ಥಾನಕ್ಕೆ ಫಡ್ನವೀಸ್ ರಾಜಿನಾಮೆ ನೀಡುವುದರೊಂದಿಗೆ ಸರಕಾರ ಪತನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

24 minutes ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

1 hour ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

4 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

8 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

8 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

19 hours ago