Advertisement
Political mirror

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Share

ಮುಂಬೈ: ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು , ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜಿನಾಮೆ ನೀಡಿದ್ದಾರೆ. ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Advertisement
Advertisement
Advertisement
Advertisement

 

Advertisement
ಅಜಿತ್ ಪವಾರ್

 

ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು. ಬಹುಮತ ಸಾಬೀತಿಗೆ ಮೊದಲೇ ಮುಖ್ಯಮಂತ್ರಿ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಸಿಕ್ಕಿದೆ. ಆದರೆ ನಾವು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದ್ದರಿಂದ ಕೆಲವು ಸೀಟುಗಳ ಕೊರತೆ ಉಂಟಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದರೆ ಅದರ ಕಥೆ ಬೇರೆನೇ ಇರುತ್ತಿತ್ತು. ಫಲಿತಾಂಶದ ಬಳಿಕ ಶಿವಸೇನೆ ಅಧಿಕಾರ ಹಂಚಿಕೆಯ ಪ್ರಸ್ತಾಪ ಮಾಡಿತು. ಆದರೆ ಯಾವತ್ತೂ ಶಿವಸೇನೆಗೆ ಅಂತಹ ಭರವಸೆಯನ್ನು ನಾವು ನೀಡಿರಲಿಲ್ಲ ಎಂದು ಹೇಳಿದರು.

Advertisement

ನಾವು ಅಜಿತ್ ಪವಾರ್​ ಬೆಂಬಲ ನೀಡಿದ್ದನ್ನು ನೋಡಿ ಇಡೀ ಎನ್​ಸಿಪಿ ಪಕ್ಷ ನಮ್ಮೊಂದಿಗೆ ಇದೆ ಎಂದು ಭಾವಿಸಿದೆವು. ಆದರೆ ಹಾಗಾಗಲಿಲ್ಲ. ನಮಗೆ ಸಂಖ್ಯೆಯ ಕೊರತೆ ಇದೆ. ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ಎನ್​ಸಿಪಿಯ ಅಜಿತ್​ ಪವಾರ್​ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ದೇವೇಂದ್ರ ಫಡ್ನವೀಸ್​ ಹಾಗೂ ಅಜಿತ್ ಪವಾರ್​ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ರಾತ್ರೋರಾತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು. ಎರಡು ದಿನಗಳ ವಿಚಾರಣೆಯ ಬಳಿಕ, ನ.27 ಸಂಜೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಮಹಾ ಸರ್ಕಾರಕ್ಕೆ ಸುಪ್ರೀಂ ಆದೇಶ ನೀಡಿತ್ತು. ಸುಪ್ರೀಂ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್​ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಎಂ ಸ್ಥಾನಕ್ಕೆ ಫಡ್ನವೀಸ್ ರಾಜಿನಾಮೆ ನೀಡುವುದರೊಂದಿಗೆ ಸರಕಾರ ಪತನವಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

4 days ago