Advertisement
Political mirror

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Share

ಮುಂಬೈ: ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು , ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜಿನಾಮೆ ನೀಡಿದ್ದಾರೆ. ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

 

ಅಜಿತ್ ಪವಾರ್

 

ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು. ಬಹುಮತ ಸಾಬೀತಿಗೆ ಮೊದಲೇ ಮುಖ್ಯಮಂತ್ರಿ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಸಿಕ್ಕಿದೆ. ಆದರೆ ನಾವು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದ್ದರಿಂದ ಕೆಲವು ಸೀಟುಗಳ ಕೊರತೆ ಉಂಟಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದರೆ ಅದರ ಕಥೆ ಬೇರೆನೇ ಇರುತ್ತಿತ್ತು. ಫಲಿತಾಂಶದ ಬಳಿಕ ಶಿವಸೇನೆ ಅಧಿಕಾರ ಹಂಚಿಕೆಯ ಪ್ರಸ್ತಾಪ ಮಾಡಿತು. ಆದರೆ ಯಾವತ್ತೂ ಶಿವಸೇನೆಗೆ ಅಂತಹ ಭರವಸೆಯನ್ನು ನಾವು ನೀಡಿರಲಿಲ್ಲ ಎಂದು ಹೇಳಿದರು.

ನಾವು ಅಜಿತ್ ಪವಾರ್​ ಬೆಂಬಲ ನೀಡಿದ್ದನ್ನು ನೋಡಿ ಇಡೀ ಎನ್​ಸಿಪಿ ಪಕ್ಷ ನಮ್ಮೊಂದಿಗೆ ಇದೆ ಎಂದು ಭಾವಿಸಿದೆವು. ಆದರೆ ಹಾಗಾಗಲಿಲ್ಲ. ನಮಗೆ ಸಂಖ್ಯೆಯ ಕೊರತೆ ಇದೆ. ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ಎನ್​ಸಿಪಿಯ ಅಜಿತ್​ ಪವಾರ್​ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ದೇವೇಂದ್ರ ಫಡ್ನವೀಸ್​ ಹಾಗೂ ಅಜಿತ್ ಪವಾರ್​ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ರಾತ್ರೋರಾತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು. ಎರಡು ದಿನಗಳ ವಿಚಾರಣೆಯ ಬಳಿಕ, ನ.27 ಸಂಜೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಮಹಾ ಸರ್ಕಾರಕ್ಕೆ ಸುಪ್ರೀಂ ಆದೇಶ ನೀಡಿತ್ತು. ಸುಪ್ರೀಂ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್​ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಎಂ ಸ್ಥಾನಕ್ಕೆ ಫಡ್ನವೀಸ್ ರಾಜಿನಾಮೆ ನೀಡುವುದರೊಂದಿಗೆ ಸರಕಾರ ಪತನವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

5 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

10 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

11 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

13 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

13 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago