Advertisement
Political mirror

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Share

ಮುಂಬೈ: ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದಲ್ಲಿ ರಾಜಕೀಯದಲ್ಲಿ ತೀವ್ರ ಬದಲಾವಣೆ ಕಾಣುತ್ತಿದ್ದು , ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ರಾಜಿನಾಮೆ ನೀಡಿದ್ದಾರೆ. ಫಡ್ನವಿಸ್ ಸುದ್ದಿಗೋಷ್ಠಿಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

 

ಅಜಿತ್ ಪವಾರ್

 

ಶನಿವಾರ ರಾತೋರಾತ್ರಿ ಮಹಾರಾಷ್ಟ್ರದಲ್ಲಿ ಸರಕಾರ ರಚಿಸಿದ್ದ ಬಿಜೆಪಿಗೆ ಸುಪ್ರೀಂಕೋರ್ಟ್ ಬುಧವಾರವೇ ಬಹುಮತ ಸಾಬೀತುಪಡಿಸಲು ಆದೇಶಿಸಿತ್ತು. ಬಹುಮತ ಸಾಬೀತಿಗೆ ಮೊದಲೇ ಮುಖ್ಯಮಂತ್ರಿ ಫಡ್ನವಿಸ್ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಜನಾದೇಶ ಸಿಕ್ಕಿದೆ. ಆದರೆ ನಾವು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಕಡಿಮೆ ಸ್ಥಾನಗಳಿಗೆ ಸ್ಪರ್ಧಿಸಿದ್ದರಿಂದ ಕೆಲವು ಸೀಟುಗಳ ಕೊರತೆ ಉಂಟಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಿದ್ದರೆ ಅದರ ಕಥೆ ಬೇರೆನೇ ಇರುತ್ತಿತ್ತು. ಫಲಿತಾಂಶದ ಬಳಿಕ ಶಿವಸೇನೆ ಅಧಿಕಾರ ಹಂಚಿಕೆಯ ಪ್ರಸ್ತಾಪ ಮಾಡಿತು. ಆದರೆ ಯಾವತ್ತೂ ಶಿವಸೇನೆಗೆ ಅಂತಹ ಭರವಸೆಯನ್ನು ನಾವು ನೀಡಿರಲಿಲ್ಲ ಎಂದು ಹೇಳಿದರು.

ನಾವು ಅಜಿತ್ ಪವಾರ್​ ಬೆಂಬಲ ನೀಡಿದ್ದನ್ನು ನೋಡಿ ಇಡೀ ಎನ್​ಸಿಪಿ ಪಕ್ಷ ನಮ್ಮೊಂದಿಗೆ ಇದೆ ಎಂದು ಭಾವಿಸಿದೆವು. ಆದರೆ ಹಾಗಾಗಲಿಲ್ಲ. ನಮಗೆ ಸಂಖ್ಯೆಯ ಕೊರತೆ ಇದೆ. ನಾನು ನನ್ನ ರಾಜೀನಾಮೆಯನ್ನು ರಾಜ್ಯಪಾಲರಿಗೆ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಮೈತ್ರಿ ಸರ್ಕಾರ ರಚನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿರುವಾಗ ಎನ್​ಸಿಪಿಯ ಅಜಿತ್​ ಪವಾರ್​ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ದೇವೇಂದ್ರ ಫಡ್ನವೀಸ್​ ಹಾಗೂ ಅಜಿತ್ ಪವಾರ್​ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ರಾತ್ರೋರಾತ್ರಿ ಸರ್ಕಾರ ರಚನೆಗೆ ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಎನ್​ಸಿಪಿ-ಕಾಂಗ್ರೆಸ್​-ಶಿವಸೇನೆ ಪಕ್ಷಗಳು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದವು. ಎರಡು ದಿನಗಳ ವಿಚಾರಣೆಯ ಬಳಿಕ, ನ.27 ಸಂಜೆಯೊಳಗೆ ಬಹುಮತ ಸಾಬೀತು ಪಡಿಸುವಂತೆ ಮಹಾ ಸರ್ಕಾರಕ್ಕೆ ಸುಪ್ರೀಂ ಆದೇಶ ನೀಡಿತ್ತು. ಸುಪ್ರೀಂ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ ಅಜಿತ್ ಪವಾರ್​ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಸಿಎಂ ಸ್ಥಾನಕ್ಕೆ ಫಡ್ನವೀಸ್ ರಾಜಿನಾಮೆ ನೀಡುವುದರೊಂದಿಗೆ ಸರಕಾರ ಪತನವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

16 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

22 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

22 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago