Advertisement
ಸುದ್ದಿಗಳು

ಮಹಾರಾಷ್ಟ್ರ, ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್‌ 21ಕ್ಕೆ, 24ಕ್ಕೆ ಫಲಿತಾಂಶ ಪ್ರಕಟ

Share

ನವದೆಹಲಿ: ಸದ್ಯದಲ್ಲಿಯೇ ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್‌ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್‌ ಅರೋರಾ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಜಾರಿಯಾಗಿರುವುದರಿಂದಾಗಿ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ಸುಮಾರು 1.82 ಕೋಟಿ ಮತದಾರರ ನೋಂದಣಿಯಾಗಿದ್ದು, ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರು ಇದ್ದಾರೆ. ವಿಧಾನಸಭೆ ಚುನಾವಣೆಗಾಗಿ ಚುನಾವಣೆ ವೆಚ್ಚದ ಮೇಲೆ ನಿಗಾ ಇಡಲು ಇಬ್ಬರು ವೀಕ್ಷಕರನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.

ವಿವಿಧ ರಾಜ್ಯಗಳ ಉಪಚುನಾವಣೆ ಅ. 21ಕ್ಕೆ

ಇನ್ನುಳಿದಂತೆ ಅರುಣಾಚಲ್‌ ಪ್ರದೇಶ, ಬಿಹಾರ, ಛತ್ತೀಸ್‌ಗಢ, ಅಸ್ಸಾಂ, ಗುಜರಾತ್‌, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರಧೇಶ, ಮೇಘಾಲಯ, ಒಡಿಶಾ, ಪಾಂಡಿಚೆರಿ, ಪಂಜಾಬ್‌, ರಾಜಸ್ತಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯು ಅ. 21ರಂದು ನಡೆಯಲಿದ್ದು, ಅ. 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

6 hours ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago