ನವದೆಹಲಿ: ಸದ್ಯದಲ್ಲಿಯೇ ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಜಾರಿಯಾಗಿರುವುದರಿಂದಾಗಿ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ಸುಮಾರು 1.82 ಕೋಟಿ ಮತದಾರರ ನೋಂದಣಿಯಾಗಿದ್ದು, ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರು ಇದ್ದಾರೆ. ವಿಧಾನಸಭೆ ಚುನಾವಣೆಗಾಗಿ ಚುನಾವಣೆ ವೆಚ್ಚದ ಮೇಲೆ ನಿಗಾ ಇಡಲು ಇಬ್ಬರು ವೀಕ್ಷಕರನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ವಿವಿಧ ರಾಜ್ಯಗಳ ಉಪಚುನಾವಣೆ ಅ. 21ಕ್ಕೆ
ಇನ್ನುಳಿದಂತೆ ಅರುಣಾಚಲ್ ಪ್ರದೇಶ, ಬಿಹಾರ, ಛತ್ತೀಸ್ಗಢ, ಅಸ್ಸಾಂ, ಗುಜರಾತ್, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರಧೇಶ, ಮೇಘಾಲಯ, ಒಡಿಶಾ, ಪಾಂಡಿಚೆರಿ, ಪಂಜಾಬ್, ರಾಜಸ್ತಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯು ಅ. 21ರಂದು ನಡೆಯಲಿದ್ದು, ಅ. 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…