ನವದೆಹಲಿ: ಸದ್ಯದಲ್ಲಿಯೇ ಅವಧಿ ಮುಕ್ತಾಯಗೊಳ್ಳಲಿರುವ ಮಹಾರಾಷ್ಟ್ರ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಯು ಒಂದೇ ಹಂತದಲ್ಲಿ ಅಕ್ಟೋಬರ್ 21ರಂದು ನಡೆಯಲಿದ್ದು, 24ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣೆ ಆಯೋಗದ ಮುಖ್ಯಸ್ಥ ಸುನಿಲ್ ಅರೋರಾ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ದಿನಾಂಕ ಜಾರಿಯಾಗಿರುವುದರಿಂದಾಗಿ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ ಸುಮಾರು 1.82 ಕೋಟಿ ಮತದಾರರ ನೋಂದಣಿಯಾಗಿದ್ದು, ಮಹಾರಾಷ್ಟ್ರದಲ್ಲಿ 8.94 ಕೋಟಿ ಮತದಾರರು ಇದ್ದಾರೆ. ವಿಧಾನಸಭೆ ಚುನಾವಣೆಗಾಗಿ ಚುನಾವಣೆ ವೆಚ್ಚದ ಮೇಲೆ ನಿಗಾ ಇಡಲು ಇಬ್ಬರು ವೀಕ್ಷಕರನ್ನು ಮಹಾರಾಷ್ಟ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
ವಿವಿಧ ರಾಜ್ಯಗಳ ಉಪಚುನಾವಣೆ ಅ. 21ಕ್ಕೆ
ಇನ್ನುಳಿದಂತೆ ಅರುಣಾಚಲ್ ಪ್ರದೇಶ, ಬಿಹಾರ, ಛತ್ತೀಸ್ಗಢ, ಅಸ್ಸಾಂ, ಗುಜರಾತ್, ಹಿಮಾಚಲ ಪ್ರದೇಶ, ಕೇರಳ, ಮಧ್ಯಪ್ರಧೇಶ, ಮೇಘಾಲಯ, ಒಡಿಶಾ, ಪಾಂಡಿಚೆರಿ, ಪಂಜಾಬ್, ರಾಜಸ್ತಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶದಲ್ಲಿ ಉಪಚುನಾವಣೆಯು ಅ. 21ರಂದು ನಡೆಯಲಿದ್ದು, ಅ. 24ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…