ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

Advertisement

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

7 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

22 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

22 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

22 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

23 hours ago