ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

Advertisement
Advertisement

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!

 

Advertisement

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

6 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

7 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

14 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

15 hours ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

15 hours ago