Advertisement
ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

Advertisement
Advertisement

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

Advertisement

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

Advertisement

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Advertisement

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

ಕರಾವಳಿಯಲ್ಲಿ “ಕ್ಯಾರ್” ಚಂಡಮಾರುತಕ್ಕೆ “ಕೇರ್” : ಬೆನ್ನುಬೆನ್ನಿಗೇ 3 ಚಂಡಮಾರುತದ ಸುಳಿಯಲ್ಲಿ ಕರಾವಳಿ…!

Advertisement

 

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

18 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

2 days ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

3 days ago