Advertisement
ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago