Advertisement
ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago