Advertisement
ವಿಶೇಷ ವರದಿಗಳು

“ಮಹಾ” ಭಯ ದೂರವಾಯಿತು ಈಗ ಬುಲ್ ಬುಲ್…!

Share

ಮಂಗಳೂರು: ಮತ್ತೆ ಚಂಡಮಾರುತದ ಪ್ರಭಾವ ಶುರುವಾಗಿದೆ. ಕ್ಯಾರ್ , ಮಹಾ ಚಂಡಮಾರುತವು ಅರಬೀ ಸಮುದ್ರದಲ್ಲಿ  ಕಂಡುಬಂದು ಕರಾವಳಿ ಪ್ರದೇಶ ಹಾಗೂ ಒಳನಾಡಿನಲ್ಲಿ  ಭಾರೀ ಮಳೆಯ ಸೂಚನೆ ನೀಡಿ ಬಳಿಕ  ತಣ್ಣಗಾಯಿತು. ಸದ್ಯ ಗುಜರಾತ್ ಕರಾವಳಿ ತೀರದಲ್ಲಿದ್ದರೂ ದುರ್ಬಲವಾಗುತ್ತಾ ಸಾಗಿದೆ. ಯಾವುದೇ ಆತಂಕವಿಲ್ಲ. ಮುಂಬಯಿ ಸೇರಿದಂತೆ ಕೆಲವು ಕಡೆ ಮಳೆಯಾಗಲಿದೆ.

ಆದರೆ ಈಗ ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿ ಬುಲ್ ಬುಲ್ ಚಂಡಮಾರುತ ಕಂಡುಬಂದಿದೆ. ಈಗಾಗಲೇ ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಹೈ ಎಲರ್ಟ್ ಘೋಷಣೆ ಮಾಡಲಾಗಿದೆ. ಬುಲ್ ಬುಲ್ ಪರಿಣಾಮವಾಗಿ  ಕೇರಳ, ತಮಿಳುನಾಡು , ಕರ್ನಾಟಕದಲ್ಲಿ  ನ.8, 9, 10 ರಂದು ಮಳೆಯಾಗಲಿದೆ. ನ.12 ರವರೆಗೆ ಈ ಚಂಡಮಾರುತದ ಪ್ರಭಾವ ಇದೆ.

ಬುಲ್ ಬುಲ್ ಚಂಡಮಾರುತವು ಒಡಿಶಾದಲ್ಲಿ ಪ್ರಭಾವ ಬೀರಲಿದೆ. ಈಗಾಗಲೇ ಒಡಿಶಾದ 16 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರ ಜೊತೆಗೆ ಪಶ್ಚಿಮ ಬಂಗಾಳದಲ್ಲೂ ಪ್ರಭಾವ ಬೀರಲಿದೆ. ಈಗಿನ ಪ್ರಕಾರ ಅಂಡಮಾನ್ ನಿಕೋಬಾರ್ ನಲ್ಲಿ ಮುಂದಿನ 24 ಗಂಟೆಗಳಲ್ಲಿ  ಮಳೆಯಾದರೆ ನ.9 ಹಾಗೂ 10 ರಂದು ಬುಲ್ ಬುಲ್ ಒಡಿಶಾಕ್ಕೆ ಪ್ರವೇಶಿಸಿ ಭಾರೀ ಮಳೆಯಾಗಲಿದೆ.ಕರ್ನಾಟಕ ಕರಾವಳಿ ಭಾಗ, ಮಲೆನಾಡು, ಗುಜರಾತ್ ,ಒಡಿಶಾದಲ್ಲಿ ಚಂಡಮಾರುತ ಪ್ರಭಾವ ಇರಲಿದೆ.

ಪಶ್ಚಿಮ ಬಂಗಾಳದಲ್ಲಿ ನ.10 ಹಾಗೂ 11 ರಂದು ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯ ವರದಿ ಹೇಳಿದೆ. ಇದೇ ಸಂದರ್ಭ ನ.8 ರಿಂದ 10 ರವರೆಗೆ  ರಾಜ್ಯದ ಕರಾವಳಿ ಹಾಗೂ ಒಳನಾಡು ಸೇರಿದಂತೆ ವಿವಿದೆಡೆ ಮಳೆಯಾಗಬಹುದು. ಬುಲ್ ಬುಲ್ ಚಂಡಮಾರುತದ ಪ್ರಭಾವದಿಂದ ರಾಜ್ಯದ  ಶಿವಮೊಗ್ಗ, ಧಾರವಾಡ, ಕೊಡಗು, ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8 ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಲ್ ಬುಲ್ ನಿಂದಾಗಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದ್ದರೂ  ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನವೆಂಬರ್ 8ರ ಬಳಿಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸುಳ್ಯ ನ್ಯೂಸ್.ಕಾಂ ಅ.24 ರಂದು ಹವಾಮಾನದ ಬಗ್ಗೆ ವಿಶ್ಲೇಷಣೆ ಮಾಡಿತ್ತು. 3 ಚಂಡಮಾರುತದ ಪ್ರಭಾವ ಇದೆ ಎಂಬ ಹವಾಮಾನ ಇಲಾಖೆಯ ವರದಿಯ ವಿಶ್ಲೇಷಣೆ ಇಲ್ಲಿದೆ…

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

57 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

9 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

10 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

10 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

22 hours ago