ಮುಂಬೈ : ನಾಟಕೀಯ ಬೆಳವಣಿಗೆಯಲ್ಲಿ ಎರಡನೇ ಬಾರಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ ಬಳಿಕ, ಇದೀಗ ಶಿವಸೇನೆಯ ಮುಖಂಡ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಲು ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 1ರಂದು ಶಿವಾಜಿ ಪಾರ್ಕ್ ನಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧವಾರ ಬಹುಮತ ಸಾಬೀತುಪಡಿಸುವಂತೆ ಫಡ್ನವೀಸ್ ಸರಕಾರಕ್ಕೆ ಸುಪ್ರೀಂ ಕೋರ್ಟ್ ಡೆಡ್ ಲೈನ್ ನೀಡಿತ್ತು. ಆದರೆ ಬಹುಮತ ಇಲ್ಲದ ಕಾರಣ ಮಹಾರಾಷ್ಟ್ರದ ಸಿಎಂ ಆಗಿದ್ದ ಬಿಜೆಪಿಯ ದೇವೇಂದ್ರ ಫಡ್ನವೀಸ್ ಮಂಗಳವಾರ ಸಂಜೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಶಿವಸೇನೆ, ಕಾಂಗ್ರೆಸ್ ಹಾಗೂ ಎನ್ ಸಿ ಪಿ ಮೈತ್ರಿ ಪಕ್ಷದ ಸರ್ಕಾರ ಮಹಾರಾಷ್ಟ್ರದಲ್ಲಿ ಅಸ್ಥಿತ್ವಕ್ಕೆ ಬರಲಿದ್ದು, ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಂಗಳವಾರ ನಡೆದ ಶಿವಸೇನೆ, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ ಜಂಟಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನಾಗಿ ಉದ್ಧವ್ ಠಾಕ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…