Advertisement
ಸುದ್ದಿಗಳು

ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

Share

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

9 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago