Advertisement
ಸುದ್ದಿಗಳು

ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

Share

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

53 minutes ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

5 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

11 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

23 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago