Advertisement
ಸುದ್ದಿಗಳು

ಮಹಿಳಾ ಕ್ರಿಕೆಟ್- ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಕ್ಕೆ ಎಂಟು ವಿಕೆಟ್​ಗಳ ಗೆಲುವು

Share

ಮುಂಬೈ: ವಡೋದರಾದಲ್ಲಿ ನಡೆದ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಭಾರತದ ಮಹಿಳಾ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್ ಗೆಲುವು ಸಾಧಿಸಿದೆ. ಮೊದಲು ಬ್ಯಾಟ್​ ಮಾಡಿದ ದಕ್ಷಿಣ ಆಫ್ರಿಕಾ 45.4 ಓವರ್ ನಲ್ಲಿ 164 ರನ್​ಗಳ ಆಲ್ ಔಟ್ ಆಯಿತು. ನಂತರ ಬ್ಯಾಟ್​ ಮಾಡಿದ ಭಾರತ 41.4 ಓವರ್ ನಲ್ಲಿ 2 ವಿಕೆಟ್​ಗಳ ನಷ್ಟಕ್ಕೆ 165 ರನ್​ ಗಳಿಸುವ ಮೂಲಕ ಗೆಲುವಿನ ನಗು ಬೀರಿತು.

ಹೊಸ ದಾಖಲೆ ನಿರ್ಮಿಸಿದ ಕ್ಯಾಪ್ಟನ್​ ಮಿಥಾಲಿ ರಾಜ್​

Advertisement

ಭಾರತದ ಮಹಿಳಾ ಕ್ರಿಕೆಟ್​ ತಂಡದ ಟೆಸ್ಟ್​ ಹಾಗೂ ಏಕದಿನ ಪಂದ್ಯಾವಳಿಯ ನಾಯಕಿ ಮಿಥಾಲಿ ರಾಜ್​ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 20ಕ್ಕಿಂತಲೂ ಹೆಚ್ಚು ವರ್ಷ ನೆಲೆನಿಂತ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Advertisement

ಇಂದು ವಡೋದರಾದ ರಿಲಯನ್ಸ್​ ಸ್ಟೇಡಿಯಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಪಂದ್ಯಾವಳಿಯಲ್ಲಿ ಆಡುವ ಮೂಲಕ ಈ ಸಾಧನೆಯನ್ನು ತಮ್ಮ ಮುಡಿಗೇರಿಸಿಕೊಂಡರು. ದಕ್ಷಿಣ ಆಫ್ರಿಯಾ ವಿರುದ್ಧ 11* ಗಳಿಸಿದರು. ಈ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಎಂಟು ವಿಕೆಟ್​ಗಳ ಗೆಲುವು ಸಾಧಿಸಿದೆ.

ಮಿಥಾಲಿ ರಾಜ್​ ಅವರು 1999ರ ಜೂನ್​ 26ರಂದು ಐರ್ಲೆಂಡ್​ ವಿರುದ್ಧ ತಮ್ಮ ಮೊದಲ ಏಕದಿನ ಪಂದ್ಯ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದರು. ಅವರೀಗ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟು 20 ವರ್ಷದ ಮೇಲೆ 105 ದಿನಗಳಾಗಿವೆ. ಏಕದಿನ ಪಂದ್ಯಾವಳಿಗಳನ್ನು 20 ವರ್ಷಗಳಿಂದ ಆಡುತ್ತಿರುವ ಮೊದಲ ಮಹಿಳಾ ಕ್ರಿಕೆಟರ್​ ಎಂಬ ಹೆಗ್ಗಳಿಕೆಯೂ ಮಿಥಾಲಿಯವರದ್ದಾಗಿದೆ.
ಮಹಿಳಾ ಕ್ರಿಕೆಟ್​ನಲ್ಲಿ ಅತಿಹೆಚ್ಚು ಏಕದಿನ ಪಂದ್ಯಗಳನ್ನು ಆಡುವ ಮೂಲಕ ಮಿಥಾಲಿ ದಾಖಲೆ ನಿರ್ಮಿಸಿದ್ದಾರೆ. ಈಗಿನವರೆಗೆ 204 ಒನ್​ ಡೇ ಮ್ಯಾಚ್​ಗಳನ್ನು ಆಡಿದ್ದಾರೆ. ಈವರು ಮೊದಲ ಸ್ಥಾನದಲ್ಲಿದ್ದು ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್​ನ ಎಡ್ವರ್ಸ್​ (191 ಪಂದ್ಯ), ಹಾಗೂ ಮೂರನೇ ಸ್ಥಾನದಲ್ಲಿ ಭಾರತದ ಮಾಜಿ ಕ್ಯಾಪ್ಟನ್​ ಆಗಿದ್ದ ಜೂಲನ್​ ಗೋಸ್ವಾಮಿ (178) ಇದ್ದಾರೆ.

Advertisement

ಮಿಥಾಲಿ ರಾಜ್​ ಅವರು 10 ಟೆಸ್ಟ್​ ಪಂದ್ಯಗಳನ್ನು, 89 ಟಿ-20 ಪಂದ್ಯಾವಳಿಗಳನ್ನೂ ಆಡಿದ್ದಾರೆ. ಕಳೆದ ತಿಂಗಳಷ್ಟೇ ಟಿ-20 ಕ್ರಿಕೆಟ್​ನಿಂದ ನಿವೃತ್ತಿ ಪಡೆದಿದ್ದು, ಹರ್ಮನ್ ಪ್ರೀತ್ ಕೌರ್ ನಾಯಕಿಯಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

5 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago